ನೀರಿನ ಸೌಲಭ್ಯಕ್ಕಾಗಿ ನಾಲ್ಕು ಕೊಳವೆಬಾವಿಗಳನ್ನು ಕೊರೆಯಿಸಲಾಗಿದ್ದು, ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದಾರೆ. ತಿಪ್ಪೆ ಗೊಬ್ಬರ, ಗೋಮೂತ್ರ, ಜೀವಾಮೃತ, ಎರೆಹುಳು ಗೊಬ್ಬರದ ಜೊತೆಗೆ ರಾಸಾಯನಿಕ ಗೊಬ್ಬರ ಹಾಗೂ ಕ್ರಿಮಿನಾಶಕಗಳನ್ನು ಮಿತವಾಗಿ ಬಳಸುವ ಮೂಲಕ ಕಡಿಮೆ ಖರ್ಚಿನಲ್ಲಿ ಉತ್ತಮ ಬೆಳೆ ಬೆಳೆಯುವ ಕುರಿತು ಕೌಶಲ ಹೊಂದಿದ್ದಾರೆ.ಬೆಳೆಯ ಪೋಷಣೆಯ ಸಂಪೂರ್ಣ ಜವಾಬ್ದಾರಿಯನ್ನು ಅವರೇ ನಿರ್ವಹಿಸುತ್ತಿದ್ದಾರೆ.