<p>ರಾಯಚೂರು: ಜಿಲ್ಲೆಯಲ್ಲಿ ಅಪೌಷ್ಟಿಕತೆ ಪ್ರಮಾಣ ಕಡಿಮೆ ಆಗುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಪ್ರಮುಖವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರಬಾಬು ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನುಗಳ ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಡಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಸಮಾರಂಭದಲ್ಲಿ ಬುಧವಾರ ಮಾತನಾಡಿದರು.</p>.<p>ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆ ಒಟ್ಟಾಗಿ ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರಿಂದ ಈಗ ಅಪೌಷ್ಟಿಕತೆ ಪ್ರಮಾಣವು ಶೇ 38 ರಿಂದ ಶೇ 33ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗಗಳಲ್ಲಿ ಪಾಲಕರು ತಮ್ಮ ಮಕ್ಕಳನ್ನು ಮನೆಗಳಲ್ಲಿಯೇ ಬಿಟ್ಟು ಕೃಷಿ ಕಾರ್ಯಕ್ಕಾಗಿ ತೆರಳುವುದು ಸಾಮಾನ್ಯವಾಗಿದೆ. ಇಂಥ ಮಕ್ಕಳಿಗೂ ಪೌಷ್ಟಿಕ ಆಹಾರ ತಲುಪಿಸುವ ಕೆಲಸವನ್ನು ಅಂಗನವಾಡಿಗಳಿಂದ ಮಾಡಬೇಕಿದೆ. ಒಟ್ಟಾರೆ ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು.</p>.<p>ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ್ ಎಂ.ಎನ್. ಮಾತನಾಡಿ, ಪೋಷಣ್ ಮಾಸಾಚರಣೆ ಅಂಗವಾಗಿ ಎದೆಹಾಲು ಕುರಿತು ಜಾಗೃತಿ ಸಪ್ತಾಹ ಮಾಡಲಾಗುವುದು. ಗರ್ಭಿಣಿಯರಲ್ಲಿ ರಕ್ತಹೀನತೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ದಯಾನಂದ ಬೇಲೂರೆ, ಜಿಲ್ಲಾ ನಿರೂಪಣಾಧಿಕಾರಿ ಶರಣಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್, ಸ್ತ್ರೀಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷೆ ಈರಮ್ಮ ತಲಮಾರಿ, ಅಕ್ಷರ ದಾಸೋಹ ಅಧಿಕಾರಿ ಮಂಜುಳಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಜಿಲ್ಲೆಯಲ್ಲಿ ಅಪೌಷ್ಟಿಕತೆ ಪ್ರಮಾಣ ಕಡಿಮೆ ಆಗುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಪ್ರಮುಖವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರಬಾಬು ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನುಗಳ ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಡಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಸಮಾರಂಭದಲ್ಲಿ ಬುಧವಾರ ಮಾತನಾಡಿದರು.</p>.<p>ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆ ಒಟ್ಟಾಗಿ ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರಿಂದ ಈಗ ಅಪೌಷ್ಟಿಕತೆ ಪ್ರಮಾಣವು ಶೇ 38 ರಿಂದ ಶೇ 33ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗಗಳಲ್ಲಿ ಪಾಲಕರು ತಮ್ಮ ಮಕ್ಕಳನ್ನು ಮನೆಗಳಲ್ಲಿಯೇ ಬಿಟ್ಟು ಕೃಷಿ ಕಾರ್ಯಕ್ಕಾಗಿ ತೆರಳುವುದು ಸಾಮಾನ್ಯವಾಗಿದೆ. ಇಂಥ ಮಕ್ಕಳಿಗೂ ಪೌಷ್ಟಿಕ ಆಹಾರ ತಲುಪಿಸುವ ಕೆಲಸವನ್ನು ಅಂಗನವಾಡಿಗಳಿಂದ ಮಾಡಬೇಕಿದೆ. ಒಟ್ಟಾರೆ ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು.</p>.<p>ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ್ ಎಂ.ಎನ್. ಮಾತನಾಡಿ, ಪೋಷಣ್ ಮಾಸಾಚರಣೆ ಅಂಗವಾಗಿ ಎದೆಹಾಲು ಕುರಿತು ಜಾಗೃತಿ ಸಪ್ತಾಹ ಮಾಡಲಾಗುವುದು. ಗರ್ಭಿಣಿಯರಲ್ಲಿ ರಕ್ತಹೀನತೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ದಯಾನಂದ ಬೇಲೂರೆ, ಜಿಲ್ಲಾ ನಿರೂಪಣಾಧಿಕಾರಿ ಶರಣಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್, ಸ್ತ್ರೀಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷೆ ಈರಮ್ಮ ತಲಮಾರಿ, ಅಕ್ಷರ ದಾಸೋಹ ಅಧಿಕಾರಿ ಮಂಜುಳಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>