ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಅಮೃತ ಮಹೋತ್ಸವ: ಮಹಿಳೆಯರಿಗೆ ಸನ್ಮಾನ

Last Updated 9 ಮಾರ್ಚ್ 2023, 12:16 IST
ಅಕ್ಷರ ಗಾತ್ರ

ರಾಯಚೂರು: ಪ್ರಜಾವಾಣಿ ಅಮೃತ ಮಹೋತ್ಸವ ಅಂಗವಾಗಿ ನಗರದ ಎಸ್‌ಆರ್‌ಕೆ ಬಿಇಡಿ ಮಹಾವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ‌ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಐದು ಮಹಿಳೆಯರನ್ನು ಸನ್ಮಾನಿಸಲಾಯಿತು.

ಪೌರಕಾರ್ಮಿಕರಾದ ಲಕ್ಷ್ಮಮ್ಮ ಹುಲಿಗೆಪ್ಪ, ಪದ್ಮಾವತಿ ವೆಂಕಟೇಶ, ಶುಶ್ರೂಷಕಿ ಸೈಯದಾ ಪರ್ವೀನ್ ಬೇಗಂ, ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ಶರಣಪ್ಪ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಈರಮ್ಮ ತಲಮಾರಿ‌ ಅವರನ್ನು ಸನ್ಮಾನಿಸಲಾಯಿತು.

ರಾಯಚೂರಿನ ಲೋಹಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 'ಮಹಿಳೆಯ ಬದುಕು- ಬರಹ' ವಿಷಯ ಕುರಿತು ಚಿಟಗುಪ್ಪ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕಿ ಡಾ.ಜಗದೇವಿ ಗಾಯಕವಾಡ ಅವರು ವಿಶೇಷ ಉಪನ್ಯಾಸ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT