ಸೋಮವಾರ ಮಸ್ಕಿ ಪಟ್ಟಣದಲ್ಲಿ ಪ್ರತಾಪಗೌಡ ಪಾಟೀಲ ಅವರ ಪುತ್ರರು ಹಾಗೂ ಕುಟುಂಬದ ಸದಸ್ಯರು ಪೊಲೀಸ್ ಅಧಿಕಾರಿಗಳ ಮುಂದೆಯೇ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಅಂಗಡಿ ಮನೆಗಳಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಆದರೂ ಸರ್ಕಲ್ ಇನ್ಸ್ಪೆಕ್ಟರ್ ದೀಪಕ್ ಬೂಸರೆಡ್ಡಿ ಹಾಗೂ ಸಬ್ ಇನ್ಸ್ಪೆಕ್ಟರ್ ಸಿದ್ದರಾಮ ಅವರು ರಕ್ಷಣೆ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.