<p><strong>ರಾಯಚೂರು</strong>: ‘ಎರಡು ಸಲ ಶಾಸಕನಾಗಿ ಆಯ್ಕೆ ಮಾಡಿ ಆಶ್ರಯ ಕೊಟ್ಟಿರುವ ಪಕ್ಷದ ಬೆನ್ನಿಗೆ ಚೂರಿ ಹಾಕಿರುವ ಪ್ರತಾಪಗೌಡ ಪಾಟೀಲ, ಬಿಜೆಪಿ ಸೇರ್ಪಡೆಯಾಗಿ ಮಸ್ಕಿ ಕ್ಷೇತ್ರದ ಜನರಿಗೆ ಮೋಸ ಮಾಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.</p>.<p>ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನ ಪಕ್ಕದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಬಸನಗೌಡ ತುರುವಿಹಾಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಸ್ಕಿ ವಿಧಾನಸಭೆ ಕ್ಷೇತ್ರವು ಹೊಸದಾಗಿ ರಚನೆಯಾಗಿದ್ದ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದಾಗ ಕೇಳಿದಷ್ಟು ಅನುದಾನ ಮಂಜೂರಿ ನೀಡಿದ್ದೇನೆ. ಯಾವುದೇ ಕಾರಣಯಿಲ್ಲದೆ ಪಕ್ಷಾಂತರ ಮಾಡಿದವರನ್ನು ಜನದ್ರೋಹಿಗಳು ಎಂದು ಕರೆಯುತ್ತಾರೆ. ಹಣದ ಆಸೆಯಿಂದ ತನ್ನನ್ನು ತಾನು ಮಾರಿಕೊಂಡು ಬಿಜೆಪಿ ಸೇರಿದ್ದಾರೆ’ ಎಂದರು.</p>.<p>ಮಸ್ಕಿ ಕ್ಷೇತ್ರಕ್ಕೆ ಇನ್ನೂ ಹಲವು ಭಾರಿ ಭೇಟಿ ಮಾಡುತ್ತೇನೆ. ಎಲ್ಲರೂ ಸಂಕಲ್ಪ ಮಾಡಿ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೆಚ್ಚಿಕೊಂಡು ಬಸನಗೌಡ ತುರ್ವಿಹಾಳ ಮತ್ತು ಅವರ ಬೆಂಬಲಿಗರು ಪಕ್ಷಕ್ಕೆ ಬಂದಿದ್ದಾರೆ. ಗೆಲ್ಲುವ ಭರವಸೆ ಇರುವುದರಿಂದ ಮಸ್ಕಿ ಉಪಚುನಾವಣೆಯಲ್ಲಿ ಬಸನಗೌಡ ಅವರಿಗೇ ಟಿಕೆಟ್ ಕೊಡುತ್ತೇವೆ ಎಂದು ಹೇಳಿದರು.</p>.<p>ಬಿಜೆಪಿ ಸರ್ಕಾರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. ಅಧಿಕಾರಕ್ಕೆ ಬಂದ ನಂತರ ಯಾವುದೇ ಜನಪರ ಕೆಲಸ ಮಾಡಿಲ್ಲ. ಕೊರೊನಾ ಔಷಧಿ ಖರೀದಿಯಲ್ಲಿ ₹2 ಸಾವಿರ ಕೋಟಿ ಲಂಚ ಹೊಡೆದಿದ್ದಾರೆ. ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆದಿದ್ದಾರೆ. ವಿಜಯೇಂದ್ರ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಸರ್ಕಾರ ಹಾಳು ಮಾಡಿದೆ. ಐದು ತಿಂಗಳಾದರೂ ಮಾಸಾಶನಗಳನ್ನು ನೀಡಿಲ್ಲ. ನನ್ನ ಅವಧಿಯಲ್ಲಿ ಒಂದೇ ಒಂದು ಚೆಕ್ ಬೌನ್ಸ್ ಆಗಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕ ಬರುತ್ತದೆ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಮಸ್ಕಿ ಕ್ಷೇತ್ರದ ಕಾರ್ಯಕರ್ತರು ಇಡೀ ರಾಜ್ಯಕ್ಕೆ ಒಂದು ಶಕ್ತಿ ಕೊಡುತ್ತಿದ್ದಾರೆ. ಈ ಸಮಾವೇಶವನ್ನು ಮರೆಯಲು ಸಾಧ್ಯವಿಲ್ಲ. ರಾಯಚೂರು ಜಿಲ್ಲೆಯ ಎಲ್ಲ ಮುಖಂಡರೆಲ್ಲ ಸೇರಿ ಪ್ರತಾಪಗೌಡ ಅವರ ಸ್ಥಾನಕ್ಕೆ ಬಸನಗೌಡ ತುರುವಿಹಾಳ ಯೋಗ್ಯವಾದ ವ್ಯಕ್ತಿಯನ್ನು ತಂದುಕೊಟ್ಟಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿ ಪ್ರತಾಪಗೌಡ ಹೋಗಿದ್ದಾರೆ. ಮುಂಬರುವ ಉಪಚುನಾವಣೆಯಲ್ಲಿ ಬಸನಗೌಡ ಶಾಸಕರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಳೆದ 15 ತಿಂಗಳಲ್ಲಿ ಬಡವರಿಗೆ ಮನೆಗಳನ್ನು ಕಟ್ಟಿ ಕೊಡುವುದಕ್ಕೆ ಸಾಧ್ಯವಾಗದ ವಸತಿ ಸಚಿವ ಸೋಮಣ್ಣ ಅವರು ಈಗ ಮಸ್ಕಿಯಲ್ಲಿ 6 ಸಾವಿರ ಮನೆ ನಿರ್ಮಿಸುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಹೋಗಿದ್ದಾರೆ. ಇದನ್ನು ನಂಬಬೇಡಿ. ಬಿಜೆಪಿಗೆ ಸ್ವಂತ ಬಲವಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಸಮಾವೇಶ ಆಯೋಜನೆಯಲ್ಲಿ ತೋರಿಸಿದ ಉತ್ಸಾಹವನ್ನು ಕಾರ್ಯಕರ್ತರು ಉಪಚುನಾವಣೆಯಲ್ಲಿ ತೋರಿಸಬೇಕು ಎಂದರು.</p>.<p>ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಮಾತನಾಡಿ, ಆಮಿಷಗಳಿಗೆ ಒಳಗಾಗಿ ಪ್ರತಾಪಗೌಡ ಬಿಜೆಪಿ ಸೇರಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಗುರಿಯೊಂದಿಗೆ ಎಲ್ಲರೂ ಕೆಲಸ ಮಾಡಬೇಕಿದೆ. ಮಸ್ಕಿ ಕ್ಷೇತ್ರಕ್ಕೆ ಅತಿಹೆಚ್ಚು ಅನುದಾನ ನೀಡಿರುವ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಉಪಚುನಾವಣೆ ಸವಾಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿರುವ ಪ್ರತಾಪಗೌಡ ಅವರಿಗೆ ತಕ್ಕಪಾಠ ಕಲಿಸಬೇಕು. ಕಾರ್ಯಕರ್ತರೆಲ್ಲ ಉತ್ಸಾಹದಿಂದ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಕೋರಿದರು.</p>.<p>ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ, ಕೆಪಿಸಿಸಿ ವಕ್ತಾರ ವಸಂತಕುಮಾರ, ಶಾಸಕ ರಾಘವೇಂದ್ರ ಹಿಟ್ನಾಳ, ಬಸನಗೌಡ ತುರುವಿಹಾಳ ಅವರು ಮಾತನಾಡಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಧ್ವಜ ಹಸ್ತಾಂತರಿಸಿ ಅಧಿಕೃತವಾಗಿ ಬಸನಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.</p>.<p>ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಸ್ವಾಗತಿಸಿದರು.</p>.<p>ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಶಾಸಕರಾದ ಬಸನಗೌಡ ದದ್ದಲ, ಡಿ.ಎಸ್.ಹುಲಗೇರಿ, ವಿಧಾನ ಪರಿಷತ್ ಬಸವರಾಜ ಪಾಟೀಲ, ಮುಖಂಡರಾದ ಹಂಪಯ್ಯ ನಾಯಕ, ಪುಷ್ಪಾ ಅಮರನಾಥ, ದೊಡ್ಡ ಬಸವರಾಜ, ನಿಯಾಜ್ ಖಾನ್, ಮಲ್ಲಿಕಾರ್ಜುನ ನಾಗಪ್ಪ, ನಾಗರಾಜ, ಶರಣಪ್ಪ ಮಟ್ಟೂರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಎರಡು ಸಲ ಶಾಸಕನಾಗಿ ಆಯ್ಕೆ ಮಾಡಿ ಆಶ್ರಯ ಕೊಟ್ಟಿರುವ ಪಕ್ಷದ ಬೆನ್ನಿಗೆ ಚೂರಿ ಹಾಕಿರುವ ಪ್ರತಾಪಗೌಡ ಪಾಟೀಲ, ಬಿಜೆಪಿ ಸೇರ್ಪಡೆಯಾಗಿ ಮಸ್ಕಿ ಕ್ಷೇತ್ರದ ಜನರಿಗೆ ಮೋಸ ಮಾಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.</p>.<p>ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನ ಪಕ್ಕದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಬಸನಗೌಡ ತುರುವಿಹಾಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಸ್ಕಿ ವಿಧಾನಸಭೆ ಕ್ಷೇತ್ರವು ಹೊಸದಾಗಿ ರಚನೆಯಾಗಿದ್ದ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದಾಗ ಕೇಳಿದಷ್ಟು ಅನುದಾನ ಮಂಜೂರಿ ನೀಡಿದ್ದೇನೆ. ಯಾವುದೇ ಕಾರಣಯಿಲ್ಲದೆ ಪಕ್ಷಾಂತರ ಮಾಡಿದವರನ್ನು ಜನದ್ರೋಹಿಗಳು ಎಂದು ಕರೆಯುತ್ತಾರೆ. ಹಣದ ಆಸೆಯಿಂದ ತನ್ನನ್ನು ತಾನು ಮಾರಿಕೊಂಡು ಬಿಜೆಪಿ ಸೇರಿದ್ದಾರೆ’ ಎಂದರು.</p>.<p>ಮಸ್ಕಿ ಕ್ಷೇತ್ರಕ್ಕೆ ಇನ್ನೂ ಹಲವು ಭಾರಿ ಭೇಟಿ ಮಾಡುತ್ತೇನೆ. ಎಲ್ಲರೂ ಸಂಕಲ್ಪ ಮಾಡಿ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೆಚ್ಚಿಕೊಂಡು ಬಸನಗೌಡ ತುರ್ವಿಹಾಳ ಮತ್ತು ಅವರ ಬೆಂಬಲಿಗರು ಪಕ್ಷಕ್ಕೆ ಬಂದಿದ್ದಾರೆ. ಗೆಲ್ಲುವ ಭರವಸೆ ಇರುವುದರಿಂದ ಮಸ್ಕಿ ಉಪಚುನಾವಣೆಯಲ್ಲಿ ಬಸನಗೌಡ ಅವರಿಗೇ ಟಿಕೆಟ್ ಕೊಡುತ್ತೇವೆ ಎಂದು ಹೇಳಿದರು.</p>.<p>ಬಿಜೆಪಿ ಸರ್ಕಾರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. ಅಧಿಕಾರಕ್ಕೆ ಬಂದ ನಂತರ ಯಾವುದೇ ಜನಪರ ಕೆಲಸ ಮಾಡಿಲ್ಲ. ಕೊರೊನಾ ಔಷಧಿ ಖರೀದಿಯಲ್ಲಿ ₹2 ಸಾವಿರ ಕೋಟಿ ಲಂಚ ಹೊಡೆದಿದ್ದಾರೆ. ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆದಿದ್ದಾರೆ. ವಿಜಯೇಂದ್ರ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಸರ್ಕಾರ ಹಾಳು ಮಾಡಿದೆ. ಐದು ತಿಂಗಳಾದರೂ ಮಾಸಾಶನಗಳನ್ನು ನೀಡಿಲ್ಲ. ನನ್ನ ಅವಧಿಯಲ್ಲಿ ಒಂದೇ ಒಂದು ಚೆಕ್ ಬೌನ್ಸ್ ಆಗಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕ ಬರುತ್ತದೆ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಮಸ್ಕಿ ಕ್ಷೇತ್ರದ ಕಾರ್ಯಕರ್ತರು ಇಡೀ ರಾಜ್ಯಕ್ಕೆ ಒಂದು ಶಕ್ತಿ ಕೊಡುತ್ತಿದ್ದಾರೆ. ಈ ಸಮಾವೇಶವನ್ನು ಮರೆಯಲು ಸಾಧ್ಯವಿಲ್ಲ. ರಾಯಚೂರು ಜಿಲ್ಲೆಯ ಎಲ್ಲ ಮುಖಂಡರೆಲ್ಲ ಸೇರಿ ಪ್ರತಾಪಗೌಡ ಅವರ ಸ್ಥಾನಕ್ಕೆ ಬಸನಗೌಡ ತುರುವಿಹಾಳ ಯೋಗ್ಯವಾದ ವ್ಯಕ್ತಿಯನ್ನು ತಂದುಕೊಟ್ಟಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿ ಪ್ರತಾಪಗೌಡ ಹೋಗಿದ್ದಾರೆ. ಮುಂಬರುವ ಉಪಚುನಾವಣೆಯಲ್ಲಿ ಬಸನಗೌಡ ಶಾಸಕರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಳೆದ 15 ತಿಂಗಳಲ್ಲಿ ಬಡವರಿಗೆ ಮನೆಗಳನ್ನು ಕಟ್ಟಿ ಕೊಡುವುದಕ್ಕೆ ಸಾಧ್ಯವಾಗದ ವಸತಿ ಸಚಿವ ಸೋಮಣ್ಣ ಅವರು ಈಗ ಮಸ್ಕಿಯಲ್ಲಿ 6 ಸಾವಿರ ಮನೆ ನಿರ್ಮಿಸುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಹೋಗಿದ್ದಾರೆ. ಇದನ್ನು ನಂಬಬೇಡಿ. ಬಿಜೆಪಿಗೆ ಸ್ವಂತ ಬಲವಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಸಮಾವೇಶ ಆಯೋಜನೆಯಲ್ಲಿ ತೋರಿಸಿದ ಉತ್ಸಾಹವನ್ನು ಕಾರ್ಯಕರ್ತರು ಉಪಚುನಾವಣೆಯಲ್ಲಿ ತೋರಿಸಬೇಕು ಎಂದರು.</p>.<p>ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಮಾತನಾಡಿ, ಆಮಿಷಗಳಿಗೆ ಒಳಗಾಗಿ ಪ್ರತಾಪಗೌಡ ಬಿಜೆಪಿ ಸೇರಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಗುರಿಯೊಂದಿಗೆ ಎಲ್ಲರೂ ಕೆಲಸ ಮಾಡಬೇಕಿದೆ. ಮಸ್ಕಿ ಕ್ಷೇತ್ರಕ್ಕೆ ಅತಿಹೆಚ್ಚು ಅನುದಾನ ನೀಡಿರುವ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಉಪಚುನಾವಣೆ ಸವಾಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿರುವ ಪ್ರತಾಪಗೌಡ ಅವರಿಗೆ ತಕ್ಕಪಾಠ ಕಲಿಸಬೇಕು. ಕಾರ್ಯಕರ್ತರೆಲ್ಲ ಉತ್ಸಾಹದಿಂದ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಕೋರಿದರು.</p>.<p>ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ, ಕೆಪಿಸಿಸಿ ವಕ್ತಾರ ವಸಂತಕುಮಾರ, ಶಾಸಕ ರಾಘವೇಂದ್ರ ಹಿಟ್ನಾಳ, ಬಸನಗೌಡ ತುರುವಿಹಾಳ ಅವರು ಮಾತನಾಡಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಧ್ವಜ ಹಸ್ತಾಂತರಿಸಿ ಅಧಿಕೃತವಾಗಿ ಬಸನಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.</p>.<p>ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಸ್ವಾಗತಿಸಿದರು.</p>.<p>ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಶಾಸಕರಾದ ಬಸನಗೌಡ ದದ್ದಲ, ಡಿ.ಎಸ್.ಹುಲಗೇರಿ, ವಿಧಾನ ಪರಿಷತ್ ಬಸವರಾಜ ಪಾಟೀಲ, ಮುಖಂಡರಾದ ಹಂಪಯ್ಯ ನಾಯಕ, ಪುಷ್ಪಾ ಅಮರನಾಥ, ದೊಡ್ಡ ಬಸವರಾಜ, ನಿಯಾಜ್ ಖಾನ್, ಮಲ್ಲಿಕಾರ್ಜುನ ನಾಗಪ್ಪ, ನಾಗರಾಜ, ಶರಣಪ್ಪ ಮಟ್ಟೂರ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>