<p><strong>ಮಸ್ಕಿ:</strong> ‘ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವ ಬಂದಾಗ ಮಾತ್ರ ಹಳ್ಳಿಗಳು ಅಭಿವೃದ್ಧಿ ಹೊಂದಲು ಸಾದ್ಯ’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಬುದ್ದಿನ್ನಿ (ಎಸ್) ಗ್ರಾಮದಲ್ಲಿ ಪಟ್ಟಣದ ದೇವನಾಂಪ್ರಿಯ ಸರ್ಕಾರಿಪದವಿ ಕಾಲೇಜಿನಿಂದ ಒಂದು ವಾರಗಳ ಕಾಲ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ (ಎನ್ಎಸ್ಎಸ್)ದಲ್ಲಿ ಮಂಗಳವಾರ ಅವರು ಮಾತನಾಡಿದರು.</p>.<p>ತಹಶೀಲ್ದಾರ್ ಮಂಜುನಾಥ ಭೋಗಾವತಿ ಮಾತನಾಡಿ, ‘ಕೃತಕ ಬುದ್ಧಿಮತ್ತೆ ಆಧುನಿಕ ಜಗತ್ತಿನಲ್ಲಿ ಒಂದು ವರದಾನವಾಗಿದ್ದು ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಫಲಿತಾಂಶ ಅದ್ಭುತವಾಗಿರುತ್ತದೆ’ ಎಂದರು.</p>.<p>ಡಾ.ಶಿವಶರಣಪ್ಪ ಇತ್ಲಿ, ಪ್ರಾಂಶುಪಾಲ ಮಹಾಂತಗೌಡ ಪಾಟೀಲ, ಶಿವ ಗ್ಯಾನಪ್ಪ ಲಕ್ಕುಂದಿ ಮಾತನಾಡಿದರು. ಸಣ್ಣಪ್ಪ ನಾಯಕ ಸ್ವಾಗತಿಸಿದರು. ಇಮಾಮ್ ಸಾಬ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ‘ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವ ಬಂದಾಗ ಮಾತ್ರ ಹಳ್ಳಿಗಳು ಅಭಿವೃದ್ಧಿ ಹೊಂದಲು ಸಾದ್ಯ’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಬುದ್ದಿನ್ನಿ (ಎಸ್) ಗ್ರಾಮದಲ್ಲಿ ಪಟ್ಟಣದ ದೇವನಾಂಪ್ರಿಯ ಸರ್ಕಾರಿಪದವಿ ಕಾಲೇಜಿನಿಂದ ಒಂದು ವಾರಗಳ ಕಾಲ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ (ಎನ್ಎಸ್ಎಸ್)ದಲ್ಲಿ ಮಂಗಳವಾರ ಅವರು ಮಾತನಾಡಿದರು.</p>.<p>ತಹಶೀಲ್ದಾರ್ ಮಂಜುನಾಥ ಭೋಗಾವತಿ ಮಾತನಾಡಿ, ‘ಕೃತಕ ಬುದ್ಧಿಮತ್ತೆ ಆಧುನಿಕ ಜಗತ್ತಿನಲ್ಲಿ ಒಂದು ವರದಾನವಾಗಿದ್ದು ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಫಲಿತಾಂಶ ಅದ್ಭುತವಾಗಿರುತ್ತದೆ’ ಎಂದರು.</p>.<p>ಡಾ.ಶಿವಶರಣಪ್ಪ ಇತ್ಲಿ, ಪ್ರಾಂಶುಪಾಲ ಮಹಾಂತಗೌಡ ಪಾಟೀಲ, ಶಿವ ಗ್ಯಾನಪ್ಪ ಲಕ್ಕುಂದಿ ಮಾತನಾಡಿದರು. ಸಣ್ಣಪ್ಪ ನಾಯಕ ಸ್ವಾಗತಿಸಿದರು. ಇಮಾಮ್ ಸಾಬ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>