ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ರಂದು ಪ್ರತಿಭಾ ಪುರಸ್ಕಾರ; ಸಾಧಕರಿಗೆ ಸನ್ಮಾನ

Last Updated 5 ಡಿಸೆಂಬರ್ 2019, 9:16 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾ ಛಲವಾದಿ ನೌಕರರ ಕ್ಷೇಮಾಭಿವೃದ್ಧಿ ವೇದಿಕೆಯಿಂದ ಡಿಸೆಂಬರ್ 8 ರಂದು ಭಾನುವಾರ ಬೆಳಿಗ್ಗೆ 10:30ಕ್ಕೆ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಛಲವಾದಿ ಸಮಾಜದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ನೌಕರರ ಕ್ಷೇಮಾಭಿವೃದ್ಧಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ವಸಂತ ಎಂ. ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸುವರು. ಬಳ್ಳಾರಿ ವಲಯ ಐಜಿಪಿ ಡಾ.ಎಂ ನಂಜುಂಡಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸುವರು ಎಂದು ತಿಳಿಸಿದರು.

ನರಸಿಂಹಲು, ಬಿ ರಾಘವೇಂದ್ರ, ರವಿ, ನಂದೀಶ, ಹನುಮಂತ ನಂದಿನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT