<p><strong>ಹಟ್ಟಿ ಚಿನ್ನದ ಗಣಿ</strong>: ಸ್ಥಳೀಯ ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಮಳೆ ಬಾರದಿದ್ದರಿಂದ ರೈತರು ಚಿಂತಾಕ್ರಾಂತರಾಗಿದ್ದು, ಮಳೆಗಾಗಿ ವಿವಿಧ ಪೂಜೆಗಳ ಮೊರೆ ಹೋಗಿದ್ದಾರೆ.</p>.<p>ಗುರುಗುಂಟಾ ಹೋಬಳಿ ವ್ಯಾಪ್ತಿಗೆ ಬರುವ ಕೋಠಾ, ಮೇದಿನಾಪುರ, ಆನ್ವರಿ, ನಿಲೋಗಲ್ ಯಲಗಟ್ಟಾ, ರೋಡಲಬಂಡ ತವಗ, ವೀರಾಪುರ ಗ್ರಾಮಗಳಲ್ಲಿ ಬಿತ್ತನೆ ಮಾಡುವಷ್ಟು ಮಳೆಯಾಗಿಲ್ಲ. ಇದರಿಂದ ರೈತರ ಮಕ್ಕಳು ಮಳೆಗಾಗಿ ನಿತ್ಯ ದೇವಸ್ಧಾನಗಳಿಗೆ ತೆರಳಿ ದೇವರಿಗೆ ನೀರಾಭಿಷೇಕ ಮಾಡುತ್ತಿದ್ದಾರೆ.</p>.<p>‘ಮಕ್ಕಳು ಬಿಂದಿಗೆ ಮೂಲಕ ನೀರು ತಂದು ಬುಧವಾರವೂ ದೇವಸ್ಥಾನಗಳಿಗೆ ಪ್ರದಕ್ಷಿಣೆ ಹಾಕಿ ದೇವರಿಗೆ ಜಲಾಭಿಷೇಕ ಮಾಡಿದ್ದಾರೆ. ಪಟ್ಟಣದ ಬಹುತೇಕ ಎಲ್ಲ ದೇವಸ್ಥಾನಗಳಿಗೆ ಬಿಂದಿಗೆಯಿಂದ ನೀರು ಹಾಕಲಾಗಿದೆ. ಮಳೆಗಾಗಿ ದೇವಸ್ಧಾನಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ’ ಎಂದು ಸ್ಥಳೀಯರು ಹೇಳಿದರು.</p>.<p>‘ಮಳೆ ಬಾರದಿದ್ದಾಗ ವರುಣನ ಕೃಪೆಗಾಗಿ ನಾನಾ ರೀತಿಯ ಪೂಜೆಗಳನ್ನು ವಿವಿಧೆಡೆ ಕೈಗೊಳ್ಳಲಾಗುತ್ತದೆ. ಅದರಂತೆ ಮಕ್ಕಳಿಂದ ನೀರು ತಂದು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನೀರು ಸುರಿದು, ಪೂಜೆ ಸಲ್ಲಿಸುವುದೂ ಒಂದು ಸಂಪ್ರದಾಯ’ ಎಂದು ಹಿರಿಯ ಮುಖಂಡ ಗುಂಡಪ್ಪಗೌಡ ಪೊಲೀಸ್ ಪಾಟೀಲ್ ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ಸ್ಥಳೀಯ ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಮಳೆ ಬಾರದಿದ್ದರಿಂದ ರೈತರು ಚಿಂತಾಕ್ರಾಂತರಾಗಿದ್ದು, ಮಳೆಗಾಗಿ ವಿವಿಧ ಪೂಜೆಗಳ ಮೊರೆ ಹೋಗಿದ್ದಾರೆ.</p>.<p>ಗುರುಗುಂಟಾ ಹೋಬಳಿ ವ್ಯಾಪ್ತಿಗೆ ಬರುವ ಕೋಠಾ, ಮೇದಿನಾಪುರ, ಆನ್ವರಿ, ನಿಲೋಗಲ್ ಯಲಗಟ್ಟಾ, ರೋಡಲಬಂಡ ತವಗ, ವೀರಾಪುರ ಗ್ರಾಮಗಳಲ್ಲಿ ಬಿತ್ತನೆ ಮಾಡುವಷ್ಟು ಮಳೆಯಾಗಿಲ್ಲ. ಇದರಿಂದ ರೈತರ ಮಕ್ಕಳು ಮಳೆಗಾಗಿ ನಿತ್ಯ ದೇವಸ್ಧಾನಗಳಿಗೆ ತೆರಳಿ ದೇವರಿಗೆ ನೀರಾಭಿಷೇಕ ಮಾಡುತ್ತಿದ್ದಾರೆ.</p>.<p>‘ಮಕ್ಕಳು ಬಿಂದಿಗೆ ಮೂಲಕ ನೀರು ತಂದು ಬುಧವಾರವೂ ದೇವಸ್ಥಾನಗಳಿಗೆ ಪ್ರದಕ್ಷಿಣೆ ಹಾಕಿ ದೇವರಿಗೆ ಜಲಾಭಿಷೇಕ ಮಾಡಿದ್ದಾರೆ. ಪಟ್ಟಣದ ಬಹುತೇಕ ಎಲ್ಲ ದೇವಸ್ಥಾನಗಳಿಗೆ ಬಿಂದಿಗೆಯಿಂದ ನೀರು ಹಾಕಲಾಗಿದೆ. ಮಳೆಗಾಗಿ ದೇವಸ್ಧಾನಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ’ ಎಂದು ಸ್ಥಳೀಯರು ಹೇಳಿದರು.</p>.<p>‘ಮಳೆ ಬಾರದಿದ್ದಾಗ ವರುಣನ ಕೃಪೆಗಾಗಿ ನಾನಾ ರೀತಿಯ ಪೂಜೆಗಳನ್ನು ವಿವಿಧೆಡೆ ಕೈಗೊಳ್ಳಲಾಗುತ್ತದೆ. ಅದರಂತೆ ಮಕ್ಕಳಿಂದ ನೀರು ತಂದು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನೀರು ಸುರಿದು, ಪೂಜೆ ಸಲ್ಲಿಸುವುದೂ ಒಂದು ಸಂಪ್ರದಾಯ’ ಎಂದು ಹಿರಿಯ ಮುಖಂಡ ಗುಂಡಪ್ಪಗೌಡ ಪೊಲೀಸ್ ಪಾಟೀಲ್ ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>