ಮಸ್ಕಿ ತಾಲ್ಲೂಕಿನ ಸುಂಕನೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸಾರ್ವಜನಿಕರು ತಾಲ್ಲೂಕು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಮೀನಿನ ಖಾತೆ ಪೋಡಿ, ಪಹಣಿ ತಿದ್ದುಪಡಿ, ವಿವಿಧ ಮಾಸಾಶನಗಳ ಮಂಜೂರಾತಿ, ಆಧಾರ್ ಕಾರ್ಡ್ ತಿದ್ದುಪಡಿ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು’ ಎಂದರು.