<p><strong>ಸಿಂಧನೂರು:</strong> ‘ಕೊರೊನಾ ಸೋಂಕು ದೃಢಪಟ್ಟ ಕಾರಣ ನನಗೆ ರೆಮ್ಡಿಸಿವಿರ್ ಚುಚ್ಚುಮದ್ದಿನ ಅವಶ್ಯಕತೆ ಇದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸಕಾಲಕ್ಕೆ ಚುಚ್ಚುಮದ್ದು ನೀಡುತ್ತಿಲ್ಲ’ ಎಂದು ಆರೋಪಿಸಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಎದುರು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>‘ನಗರದ ಪ್ರಥಮ ಪ್ರಜೆಯಾದ ನನಗೇ ವೈದ್ಯರು ನಿಗದಿತ ಸಮಯಕ್ಕೆ ಚುಚ್ಚುಮದ್ದು ಕೊಟ್ಟಿಲ್ಲ. ಇನ್ನು ಸಾಮಾನ್ಯರ ಪರಿಸ್ಥಿತಿ ಏನು. ಸರ್ಕಾರಿ ಆಸ್ಪತ್ರೆ ಕೊಂಡವಾಡದಂತಾಗಿದೆ. ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.</p>.<p>ಸ್ಥಳಕ್ಕೆ ಬಂದ ಮುಖ್ಯವೈದ್ಯಾಧಿಕಾರಿ ಹನುಮಂತ ರೆಡ್ಡಿ,‘ ಈಗಾಗಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ರಾಯಚೂರಿನಲ್ಲಿ ಸಿಬ್ಬಂದಿ ಕೈಗೆ ರೆಮ್ಡಿಸಿವಿರ್ ಕೊಟ್ಟಿದ್ದು, ಇನ್ನು ಮೂರು ತಾಸಿನೊಳಗಾಗಿ ದೊರೆಯಲಿದೆ’ ಎಂದು ಮಲ್ಲಿಕಾರ್ಜುನ ಪಾಟೀಲರಿಗೆ ಭರವಸೆ ನೀಡಿ ಪ್ರತಿಭಟನೆ ಹಿಂತೆಗೆದುಕೊಳ್ಳವಂತೆ ಮನವೊಲಿಸಿದರು.</p>.<p><strong>ಶಾಸಕರ ಮನವಿ: </strong>ಶಾಸಕ ವೆಂಕಟರಾವ್ ನಾಡಗೌಡ ಅವರು ದೂರವಾಣಿ ಮೂಲಕ ಮಲ್ಲಿಕಾರ್ಜುನ ಪಾಟೀಲ ಜತೆಗೆ ಮಾತನಾಡಿ ‘ಅತೀ ಶೀಘ್ರದಲ್ಲಿ ಚುಚ್ಚುಮದ್ದು ಬರುತ್ತದೆ. ದಯವಿಟ್ಟು ಪ್ರತಿಭಟನೆ ಹಿಂತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ನಗರಸಭೆ ಉಪಾಧ್ಯಕ್ಷ ಮುರ್ತುಜಾ ಹುಸೇನ್, ಸದಸ್ಯರಾದ ಎಚ್.ಬಾಷಾ, ಮುನೀರ್ ಪಾಷಾ, ಶರಣಪ್ಪ ಉಪ್ಪಲದೊಡ್ಡಿ, ಆಲಂಸಾಬ, ಮುಖಂಡರಾದ ಕರೀಮ್ಸಾಬ, ಸಣ್ಣತಿಮ್ಮಯ್ಯ ಭಂಗಿ, ವೆಂಕಟೇಶ ಬಂಡಿ ವಕೀಲ, ಅಮ್ಜದ್ಖಾನ್, ಉಮೇಶ ಗೋಮರ್ಸಿ ಹಾಗೂ ನನ್ನುಮೇಸ್ತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ‘ಕೊರೊನಾ ಸೋಂಕು ದೃಢಪಟ್ಟ ಕಾರಣ ನನಗೆ ರೆಮ್ಡಿಸಿವಿರ್ ಚುಚ್ಚುಮದ್ದಿನ ಅವಶ್ಯಕತೆ ಇದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸಕಾಲಕ್ಕೆ ಚುಚ್ಚುಮದ್ದು ನೀಡುತ್ತಿಲ್ಲ’ ಎಂದು ಆರೋಪಿಸಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಎದುರು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>‘ನಗರದ ಪ್ರಥಮ ಪ್ರಜೆಯಾದ ನನಗೇ ವೈದ್ಯರು ನಿಗದಿತ ಸಮಯಕ್ಕೆ ಚುಚ್ಚುಮದ್ದು ಕೊಟ್ಟಿಲ್ಲ. ಇನ್ನು ಸಾಮಾನ್ಯರ ಪರಿಸ್ಥಿತಿ ಏನು. ಸರ್ಕಾರಿ ಆಸ್ಪತ್ರೆ ಕೊಂಡವಾಡದಂತಾಗಿದೆ. ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.</p>.<p>ಸ್ಥಳಕ್ಕೆ ಬಂದ ಮುಖ್ಯವೈದ್ಯಾಧಿಕಾರಿ ಹನುಮಂತ ರೆಡ್ಡಿ,‘ ಈಗಾಗಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ರಾಯಚೂರಿನಲ್ಲಿ ಸಿಬ್ಬಂದಿ ಕೈಗೆ ರೆಮ್ಡಿಸಿವಿರ್ ಕೊಟ್ಟಿದ್ದು, ಇನ್ನು ಮೂರು ತಾಸಿನೊಳಗಾಗಿ ದೊರೆಯಲಿದೆ’ ಎಂದು ಮಲ್ಲಿಕಾರ್ಜುನ ಪಾಟೀಲರಿಗೆ ಭರವಸೆ ನೀಡಿ ಪ್ರತಿಭಟನೆ ಹಿಂತೆಗೆದುಕೊಳ್ಳವಂತೆ ಮನವೊಲಿಸಿದರು.</p>.<p><strong>ಶಾಸಕರ ಮನವಿ: </strong>ಶಾಸಕ ವೆಂಕಟರಾವ್ ನಾಡಗೌಡ ಅವರು ದೂರವಾಣಿ ಮೂಲಕ ಮಲ್ಲಿಕಾರ್ಜುನ ಪಾಟೀಲ ಜತೆಗೆ ಮಾತನಾಡಿ ‘ಅತೀ ಶೀಘ್ರದಲ್ಲಿ ಚುಚ್ಚುಮದ್ದು ಬರುತ್ತದೆ. ದಯವಿಟ್ಟು ಪ್ರತಿಭಟನೆ ಹಿಂತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ನಗರಸಭೆ ಉಪಾಧ್ಯಕ್ಷ ಮುರ್ತುಜಾ ಹುಸೇನ್, ಸದಸ್ಯರಾದ ಎಚ್.ಬಾಷಾ, ಮುನೀರ್ ಪಾಷಾ, ಶರಣಪ್ಪ ಉಪ್ಪಲದೊಡ್ಡಿ, ಆಲಂಸಾಬ, ಮುಖಂಡರಾದ ಕರೀಮ್ಸಾಬ, ಸಣ್ಣತಿಮ್ಮಯ್ಯ ಭಂಗಿ, ವೆಂಕಟೇಶ ಬಂಡಿ ವಕೀಲ, ಅಮ್ಜದ್ಖಾನ್, ಉಮೇಶ ಗೋಮರ್ಸಿ ಹಾಗೂ ನನ್ನುಮೇಸ್ತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>