‘ರೈತರ ಜೀವನಾಡಿ ನಾರಾಯಣಪುರ ಬಲದಂಡೆ ನಾಲೆ ಅಧುನೀಕರಣ, ರಾಂಪೂರ ಏತ ನೀರಾವರಿ, ನಂದವಾಡಗಿ ಏತ ನೀರಾವರಿ, 9 (ಎ) ವಿತರಣಾ ನಾಲೆ ಸೇರಿ ಇತರ ಯೋಜನೆಗಳ ಅನುಷ್ಠಾನದಲ್ಲಿ ನಡೆದಿರುವ ₹4,500 ಕೋಟಿ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಾಲ್ಕು ತಿಂಗಳಿಂದ ಹೋರಾಟ ನಡೆಸುತ್ತ ಬಂದಿದ್ದೇವೆ. ಸಮಾವೇಶದ ಮೂಲಕ ಬಹಿರಂಗ ಸವಾಲು ಹಾಕುತ್ತಿದ್ದೇವೆ’ ಎಂದರು. ‘ಕೃಷ್ಣಾ ಭಾಗ್ಯ ಜಲ ನಿಗಮದಿಂದ ರಾಯಚೂರು ಜಿಲ್ಲೆ ಸಮಗ್ರ ನೀರಾವರಿಗೆ ಒಳಪಡಬೇಕಿತ್ತು. ಆದರೆ, ರಾಜಕೀಯ ಕೈಗೊಂಬೆ ಆಗಿ ಸೇವೆ ಸಲ್ಲಿಸುತ್ತಿರುವ ಅಧಿಕಾ ರಿಗಳು ಗುತ್ತಿಗೆ ದಾರರ ಜೇಬು ಭರ್ತಿ ಮಾಡುವಂಥ ನೀಲ ನಕ್ಷೆ ಸಿದ್ಧಪಡಿಸಿ ಸರ್ಕಾರದ ಬೊಕ್ಕಸ ಕೊಳ್ಳೆ ಹೊಡೆದಿದ್ದಾರೆ. ಹೋರಾಟವನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯದಿಂದ ಕಾಣುತ್ತಿದ್ದಾರೆ. ಆದ್ದರಿಂದ ಸಮಾವೇಶದ ಮೂಲಕ ಹೋರಾಟವನ್ನು ಜನಾಂದೋಲನವಾಗಿ ಮಾರ್ಪಡಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು. ‘ಕೇಂ ದ್ರ ಸರ್ಕಾರ ತಿದ್ದುಪಡಿ ಮಾಡಿ ರುವ ಮೂರು ಕಾಯ್ದೆ ಗಳನ್ನು ವಾಪಸ್ ಪಡೆಯ ಬೇಕು ಎಂದರು.