ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ತಾಂಡಗಳಿವೆ. 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಲಿಂಗಸುಗೂರು ತಾಲ್ಲೂಕಿನಲ್ಲಿ 30 ಸಾವಿರ ಜನಸಂಖ್ಯೆ ಇದೆ. ನಮ್ಮ ಸಮಾಜ ಜಿಲ್ಲೆಯಲ್ಲಿ ಇಲ್ಲಿಯವರೆಗೂ ರಾಜಕೀಯವಾಗಿ ಮುಂದುವರಿದಿಲ್ಲ. ಯಾವುದೇ ಕ್ಷೇತ್ರವನ್ನೂ ಪ್ರತಿನಿಧಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಸಮಾಜದವರಿಗೆ ಟಿಕೆಟ್ ನೀಡಬೇಕು’ ಎಂದು ಆಗ್ರಹಿಸಿದರು.