‘ಜು.14ರಂದು ಮಾನ್ವಿಯ ಟಿಎಪಿಸಿಎಂಎಸ್ ಆವರಣದಲ್ಲಿ ನಡೆಯುವ ಶಾಸಕ ಕೆ.ಶಿವನಗೌಡ ನಾಯಕ ಅವರ ಅಭಿನಂದನಾ ಸಮಾರಂಭದಲ್ಲಿ ಸಚಿವರಾದ ವಿ.ಸೋಮಣ್ಣ, ಬಿ.ಶ್ರೀರಾಮುಲು, ಸಿ.ಸಿ.ಪಾಟೀಲ, ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು, ಶಾಸಕರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಅವರು ಮನವಿ ಮಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಮುಖಂಡರಾದ ಚಂದ್ರಕಲಾಧರ ಸ್ವಾಮಿ ಭೋಗಾವತಿ, ಉಮಾಕಾಂತ ಸಾಹುಕಾರ ಸೀಕಲ್, ವೀರೇಶ ನಾಯಕ ಬೆಟ್ಟದೂರು, ಕೆ.ನಾಗಲಿಂಗಸ್ವಾಮಿ, ಜಯರಾಜ ಜಡಿಮಳೆ, ಶಿವಕುಮಾರಸ್ವಾಮಿ ಗವಿಗಟ್ ಇದ್ದರು.