<p><strong>ರಾಯಚೂರು</strong>: ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ಮಧ್ಯಾಹ್ನ ಪ್ರಖರ ಬಿಸಿಲು ಇದ್ದರೂ ಸಂಜೆ ವೇಳೆಗೆ ವಾತಾವರಣ ಸಹಜ ಸ್ಥಿತಿಗೆ ಮರಳುತ್ತಿದೆ. ಇದರಂತೆಯೇ ಹಬ್ಬದ ಸಂದರ್ಭದಲ್ಲಿ ಏರಿದ್ದ ತರಕಾರಿ ಬೆಲೆ ಸಹಜವಾಗಿ ಇಳಿದಿದೆ.</p>.<p>ಈರುಳ್ಳಿ, ಆಲೂಗಡ್ಡೆ, ಟೊಮೆಟೊ, ಹಿರೇಕಾಯಿ ಬೆಲೆ ಸ್ಥಿರವಾಗಿದೆ. ಸಂಕ್ರಮಣದ ವೇಳೆ ಹೆಚ್ಚಾಗಿದ್ದ ಬೆಳ್ಳುಳ್ಳಿ, ಬೀನ್ಸ್, ಹೂಕೋಸು, ಗಜ್ಜರಿ, ತುಪ್ಪದ ಹಿರೇಕಾಯಿ, ಸೌತೆಕಾಯಿ, ಮೆಣಸಿನಕಾಯಿ, ಎಲೆಕೋಸು, ತೊಂಡೆಕಾಯಿ, ಡೊಣ್ಣಮೆಣಸಿನಕಾಯಿ, ಚವಳೆಕಾಯಿ, ಬದನೆಕಾಯಿ, ಬೆಂಡೆಕಾಯಿ, ಬೀಟ್ರೂಟ್ ಬೆಲೆ ಇಳಿದಿದೆ.</p>.<p>ಪ್ರತಿ ಕ್ವಿಂಟಲ್ಗೆ ಬೆಳ್ಳುಳ್ಳಿ ಬೆಲೆ ₹ 6 ಸಾವಿರ, ಬೀನ್ಸ್ ₹ 4 ಸಾವಿರ, ಹೂಕೋಸು, ಗಜ್ಜರಿ, ತುಪ್ಪದ ಹಿರೇಕಾಯಿ, ಸೌತೆಕಾಯಿ ₹ 3 ಸಾವಿರ, ಮೆಣಸಿನಕಾಯಿ, ಎಲೆಕೋಸು, ತೊಂಡೆಕಾಯಿ, ಡೊಣಮೆಣಸಿನಕಾಯಿ, ಚವಳೆಕಾಯಿ ₹ 2ಸಾವಿರ, ಬದನೆಕಾಯಿ, ಬೆಂಡೆಕಾಯಿ, ಬೀಟ್ರೂಟ್ ₹ 1 ಸಾವಿರ ಕಡಿಮೆಯಾಗಿದೆ.</p>.<p>ಸೊಪ್ಪಿನ ಬೆಲೆ ಸ್ಥಿರವಾಗಿದೆ. ಸಬ್ಬಸಗಿ, ಮೆಂತೆ, ಕೊತಂಬರಿ, ಪಾಲಕ ₹ 5ಗೆ ಒಂದು ಸಿವುಡು ಮಾರಾಟವಾಗುತ್ತಿದೆ. ಹಬ್ಬ ಮುಗಿದ ಮೇಲೆ ಸೊಪ್ಪಿನ ಬೇಡಿಕೆ ಕಡಿಮೆಯಾಗಿದೆ.</p>.<p>ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಮೆಂತೆ, ಸಬ್ಬಸಗಿ ಸೊಪ್ಪು ಬಂದಿದೆ. ಆಂಧ್ರಪ್ರದೇಶದ, ತೆಲಂಗಾಣ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಂದ ಅಲ್ಪಪ್ರಮಾಣದಲ್ಲಿ ಎಲೆಕೋಸು, ಹೂಕೋಸು, ಬದನೆಕಾಯಿ ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.</p>.<p>‘ಸಂಕ್ರಮಣ ಹಬ್ಬದ ಸಂದರ್ಭದಲ್ಲಿ ತರಕಾರಿ ಬೆಲೆ ಹೆಚ್ಚಾಗಿತ್ತು. ಆದರೆ, ಬಹುತೇಕ ಎಲ್ಲ ತರಕಾರಿ ಬೆಲೆ ಇಳಿದಿದ್ದು, ಗ್ರಾಹಕರ ಕೈಗೆಟಕುವ ದರದಲ್ಲಿ ದೊರೆಯುತ್ತಿದೆ‘ ಎಂದು ತರಕಾರಿ ವ್ಯಾಪಾರಿ ಶಶಿಕುಮಾರ ಹೇಳುತ್ತಾರೆ.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ಮಧ್ಯಾಹ್ನ ಪ್ರಖರ ಬಿಸಿಲು ಇದ್ದರೂ ಸಂಜೆ ವೇಳೆಗೆ ವಾತಾವರಣ ಸಹಜ ಸ್ಥಿತಿಗೆ ಮರಳುತ್ತಿದೆ. ಇದರಂತೆಯೇ ಹಬ್ಬದ ಸಂದರ್ಭದಲ್ಲಿ ಏರಿದ್ದ ತರಕಾರಿ ಬೆಲೆ ಸಹಜವಾಗಿ ಇಳಿದಿದೆ.</p>.<p>ಈರುಳ್ಳಿ, ಆಲೂಗಡ್ಡೆ, ಟೊಮೆಟೊ, ಹಿರೇಕಾಯಿ ಬೆಲೆ ಸ್ಥಿರವಾಗಿದೆ. ಸಂಕ್ರಮಣದ ವೇಳೆ ಹೆಚ್ಚಾಗಿದ್ದ ಬೆಳ್ಳುಳ್ಳಿ, ಬೀನ್ಸ್, ಹೂಕೋಸು, ಗಜ್ಜರಿ, ತುಪ್ಪದ ಹಿರೇಕಾಯಿ, ಸೌತೆಕಾಯಿ, ಮೆಣಸಿನಕಾಯಿ, ಎಲೆಕೋಸು, ತೊಂಡೆಕಾಯಿ, ಡೊಣ್ಣಮೆಣಸಿನಕಾಯಿ, ಚವಳೆಕಾಯಿ, ಬದನೆಕಾಯಿ, ಬೆಂಡೆಕಾಯಿ, ಬೀಟ್ರೂಟ್ ಬೆಲೆ ಇಳಿದಿದೆ.</p>.<p>ಪ್ರತಿ ಕ್ವಿಂಟಲ್ಗೆ ಬೆಳ್ಳುಳ್ಳಿ ಬೆಲೆ ₹ 6 ಸಾವಿರ, ಬೀನ್ಸ್ ₹ 4 ಸಾವಿರ, ಹೂಕೋಸು, ಗಜ್ಜರಿ, ತುಪ್ಪದ ಹಿರೇಕಾಯಿ, ಸೌತೆಕಾಯಿ ₹ 3 ಸಾವಿರ, ಮೆಣಸಿನಕಾಯಿ, ಎಲೆಕೋಸು, ತೊಂಡೆಕಾಯಿ, ಡೊಣಮೆಣಸಿನಕಾಯಿ, ಚವಳೆಕಾಯಿ ₹ 2ಸಾವಿರ, ಬದನೆಕಾಯಿ, ಬೆಂಡೆಕಾಯಿ, ಬೀಟ್ರೂಟ್ ₹ 1 ಸಾವಿರ ಕಡಿಮೆಯಾಗಿದೆ.</p>.<p>ಸೊಪ್ಪಿನ ಬೆಲೆ ಸ್ಥಿರವಾಗಿದೆ. ಸಬ್ಬಸಗಿ, ಮೆಂತೆ, ಕೊತಂಬರಿ, ಪಾಲಕ ₹ 5ಗೆ ಒಂದು ಸಿವುಡು ಮಾರಾಟವಾಗುತ್ತಿದೆ. ಹಬ್ಬ ಮುಗಿದ ಮೇಲೆ ಸೊಪ್ಪಿನ ಬೇಡಿಕೆ ಕಡಿಮೆಯಾಗಿದೆ.</p>.<p>ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಮೆಂತೆ, ಸಬ್ಬಸಗಿ ಸೊಪ್ಪು ಬಂದಿದೆ. ಆಂಧ್ರಪ್ರದೇಶದ, ತೆಲಂಗಾಣ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಂದ ಅಲ್ಪಪ್ರಮಾಣದಲ್ಲಿ ಎಲೆಕೋಸು, ಹೂಕೋಸು, ಬದನೆಕಾಯಿ ಇಲ್ಲಿಯ ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.</p>.<p>‘ಸಂಕ್ರಮಣ ಹಬ್ಬದ ಸಂದರ್ಭದಲ್ಲಿ ತರಕಾರಿ ಬೆಲೆ ಹೆಚ್ಚಾಗಿತ್ತು. ಆದರೆ, ಬಹುತೇಕ ಎಲ್ಲ ತರಕಾರಿ ಬೆಲೆ ಇಳಿದಿದ್ದು, ಗ್ರಾಹಕರ ಕೈಗೆಟಕುವ ದರದಲ್ಲಿ ದೊರೆಯುತ್ತಿದೆ‘ ಎಂದು ತರಕಾರಿ ವ್ಯಾಪಾರಿ ಶಶಿಕುಮಾರ ಹೇಳುತ್ತಾರೆ.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>