<p><strong>ರಾಯಚೂರು</strong>: ‘ನೋಂದಾಯಿಸಿದ ಪದ್ಧತಿಯಲ್ಲೇ ವೈದ್ಯಕೀಯ ವೃತ್ತಿ ನಡೆಸದ 14 ಖಾಸಗಿ ಕ್ಲಿನಿಕ್ಗಳಿಗೆ ಜಿಲ್ಲಾಡಳಿತದಿಂದ ನೋಟೀಸ್ ಜಾರಿ ಮಾಡಲಾಗಿದೆ’ ಎಂದು ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆಗಳ ನಿವಾರಣೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್.ಕೆ <br>ತಿಳಿಸಿದ್ದಾರೆ.</p>.<p>ಕರ್ನಾಟಕ ವೈದ್ಯಕೀಯ ಮಂಡಳಿ ಅಥವಾ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ಬೋರ್ಡ್ಗಳಿಂದ ಪ್ರಮಾಣ ಪತ್ರ ಪಡೆಯದೇ ವೈದ್ಯ ವೃತ್ತಿ ಮಾಡುತ್ತಿರುವವರನ್ನು ನಕಲಿ ವೈದ್ಯರು ಎಂದು ಪರಿಗಣಿಸಬೇಕಾಗುತ್ತದೆ. <br>ತಾಲ್ಲೂಕು ಮಟ್ಟದ ಸಮಿತಿಗಳಿಂದ ಪರಿಶೀಲನೆ ವೇಳೆಯಲ್ಲಿ ನಕಲಿ ವೈದ್ಯರು ಎಂದು ಗೊತ್ತಾಗಿ ಅಂತಹ ಯಾರಾದರೂ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್ ಮತ್ತು ಆಸ್ಪತ್ರೆ ನಡೆಸಿದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು <br>ಎಂದು ಎಚ್ಚರಿಕೆ <br>ನೀಡಿದ್ದಾರೆ.</p>.<p>ಕೆಪಿಎಂಇ ಕಾಯ್ದೆಯಡಿ ಚಿಕಿತ್ಸಾಲಯವನ್ನು ನೋಂದಾಯಿಸದ ಮತ್ತು ಬೇರೆ ನಮೂದಿಸಿದ ಪದ್ಧತಿ ಬಿಟ್ಟು ಬೇರೆ ಪದ್ಧತಿಯಲ್ಲಿ ಚಿಕಿತ್ದೆ ನೀಡುತ್ತಿರುವ, ಅನುಮತಿ ಇಲ್ಲದೇ ಎಕ್ಸರೆ ಮಾಡುವ ಬಗ್ಗೆ ಪರಿಶೀಲನೆ ವೇಳೆಯಲ್ಲಿ ಗೊತ್ತಾಗಿದೆ ಎಂದು <br>ಹೇಳಿದ್ದಾರೆ.</p>.<p>ದೇವದುರ್ಗ ತಾಲ್ಲೂಕಿನ 10 ಖಾಸಗಿ ಕ್ಲಿನಿಕ್ಗಳು, ಸಿರವಾರ <br>ಹಾಗೂ ಮಾನ್ವಿ ತಾಲ್ಲೂಕಿನ ತಲಾ ಎರಡು ಖಾಸಗಿ ಕ್ಲಿನಿಕ್ಗಳಿಗೆ ಈಗಾಗಲೇ ನೋಟೀಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ ಬಗ್ಗೆ ಜುಲೈ 10ರಂದು ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು <br>ತಿಳಿಸಿದ್ದಾರೆ.</p>.<p>‘ಖಾಸಗಿ ಕ್ಲಿನಿಕ್ಗಳ ಮೇಲೆ ನಿಯಮಾನುಸಾರ ದಂಢವಿದಿಸಿ ಕ್ರಮವಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಪಿಎಂಇ ಕಾಯ್ದೆ ಅನುಸಾರ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದ್ದಾರೆ.</p>.<p>ತಾಲ್ಲೂಕು ಮಟ್ಟದಲ್ಲಿ ಕೆಪಿಎಂಇ ಕಾಯ್ದೆಯಡಿ ವಿಧಿಸಲಾದ ಷರತ್ತುಗಳನ್ವಯ ಕಾಲಕಾಲಕ್ಕೆ ತಪಾಸಣೆ ಮಾಡಲು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. <br>ಈ ಸಮಿತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಮತ್ತು ಐಎಂಎ ತಾಲ್ಲೂಕು ಘಟಕದ ಅಧ್ಯಕ್ಷರು, ಎಎಫ್ಐ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಸಮಿತಿಯ ಸದಸ್ಯರಾಗಿದ್ದಾರೆ. ಈ ತಂಡವು ಪ್ರತಿ ತಿಂಗಳು ಸುಮಾರು 10 ಸಂಸ್ಥೆಗಳಿಗೆ ಭೇಟಿ ನೀಡಿ ಕೆಪಿಎಂಇ <br>ಕಾಯ್ದೆಯನ್ವಯ ಕಾರ್ಯನಿರ್ವಹಿ ಸುತ್ತಿರುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡುತ್ತಿರುವುದರ ಬಗ್ಗೆ ಪರಿಶೀಲಿಸಬೇಕು ಎಂದು <br>ತಿಳಿಸಿದ್ದಾರೆ.</p>.<div><blockquote>ತಾಲ್ಲೂಕು ಸಮಿತಿಗಳು ಪ್ರತಿ ತಿಂಗಳು 10 ವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ಕೆಪಿಎಂಇ ಕಾಯ್ದೆಯನ್ವಯ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು. </blockquote><span class="attribution">ನಿತೀಶ್ ಕೆ. ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ನೋಂದಾಯಿಸಿದ ಪದ್ಧತಿಯಲ್ಲೇ ವೈದ್ಯಕೀಯ ವೃತ್ತಿ ನಡೆಸದ 14 ಖಾಸಗಿ ಕ್ಲಿನಿಕ್ಗಳಿಗೆ ಜಿಲ್ಲಾಡಳಿತದಿಂದ ನೋಟೀಸ್ ಜಾರಿ ಮಾಡಲಾಗಿದೆ’ ಎಂದು ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆಗಳ ನಿವಾರಣೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್.ಕೆ <br>ತಿಳಿಸಿದ್ದಾರೆ.</p>.<p>ಕರ್ನಾಟಕ ವೈದ್ಯಕೀಯ ಮಂಡಳಿ ಅಥವಾ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ಬೋರ್ಡ್ಗಳಿಂದ ಪ್ರಮಾಣ ಪತ್ರ ಪಡೆಯದೇ ವೈದ್ಯ ವೃತ್ತಿ ಮಾಡುತ್ತಿರುವವರನ್ನು ನಕಲಿ ವೈದ್ಯರು ಎಂದು ಪರಿಗಣಿಸಬೇಕಾಗುತ್ತದೆ. <br>ತಾಲ್ಲೂಕು ಮಟ್ಟದ ಸಮಿತಿಗಳಿಂದ ಪರಿಶೀಲನೆ ವೇಳೆಯಲ್ಲಿ ನಕಲಿ ವೈದ್ಯರು ಎಂದು ಗೊತ್ತಾಗಿ ಅಂತಹ ಯಾರಾದರೂ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್ ಮತ್ತು ಆಸ್ಪತ್ರೆ ನಡೆಸಿದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು <br>ಎಂದು ಎಚ್ಚರಿಕೆ <br>ನೀಡಿದ್ದಾರೆ.</p>.<p>ಕೆಪಿಎಂಇ ಕಾಯ್ದೆಯಡಿ ಚಿಕಿತ್ಸಾಲಯವನ್ನು ನೋಂದಾಯಿಸದ ಮತ್ತು ಬೇರೆ ನಮೂದಿಸಿದ ಪದ್ಧತಿ ಬಿಟ್ಟು ಬೇರೆ ಪದ್ಧತಿಯಲ್ಲಿ ಚಿಕಿತ್ದೆ ನೀಡುತ್ತಿರುವ, ಅನುಮತಿ ಇಲ್ಲದೇ ಎಕ್ಸರೆ ಮಾಡುವ ಬಗ್ಗೆ ಪರಿಶೀಲನೆ ವೇಳೆಯಲ್ಲಿ ಗೊತ್ತಾಗಿದೆ ಎಂದು <br>ಹೇಳಿದ್ದಾರೆ.</p>.<p>ದೇವದುರ್ಗ ತಾಲ್ಲೂಕಿನ 10 ಖಾಸಗಿ ಕ್ಲಿನಿಕ್ಗಳು, ಸಿರವಾರ <br>ಹಾಗೂ ಮಾನ್ವಿ ತಾಲ್ಲೂಕಿನ ತಲಾ ಎರಡು ಖಾಸಗಿ ಕ್ಲಿನಿಕ್ಗಳಿಗೆ ಈಗಾಗಲೇ ನೋಟೀಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ ಬಗ್ಗೆ ಜುಲೈ 10ರಂದು ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು <br>ತಿಳಿಸಿದ್ದಾರೆ.</p>.<p>‘ಖಾಸಗಿ ಕ್ಲಿನಿಕ್ಗಳ ಮೇಲೆ ನಿಯಮಾನುಸಾರ ದಂಢವಿದಿಸಿ ಕ್ರಮವಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಪಿಎಂಇ ಕಾಯ್ದೆ ಅನುಸಾರ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದ್ದಾರೆ.</p>.<p>ತಾಲ್ಲೂಕು ಮಟ್ಟದಲ್ಲಿ ಕೆಪಿಎಂಇ ಕಾಯ್ದೆಯಡಿ ವಿಧಿಸಲಾದ ಷರತ್ತುಗಳನ್ವಯ ಕಾಲಕಾಲಕ್ಕೆ ತಪಾಸಣೆ ಮಾಡಲು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. <br>ಈ ಸಮಿತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಮತ್ತು ಐಎಂಎ ತಾಲ್ಲೂಕು ಘಟಕದ ಅಧ್ಯಕ್ಷರು, ಎಎಫ್ಐ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಸಮಿತಿಯ ಸದಸ್ಯರಾಗಿದ್ದಾರೆ. ಈ ತಂಡವು ಪ್ರತಿ ತಿಂಗಳು ಸುಮಾರು 10 ಸಂಸ್ಥೆಗಳಿಗೆ ಭೇಟಿ ನೀಡಿ ಕೆಪಿಎಂಇ <br>ಕಾಯ್ದೆಯನ್ವಯ ಕಾರ್ಯನಿರ್ವಹಿ ಸುತ್ತಿರುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡುತ್ತಿರುವುದರ ಬಗ್ಗೆ ಪರಿಶೀಲಿಸಬೇಕು ಎಂದು <br>ತಿಳಿಸಿದ್ದಾರೆ.</p>.<div><blockquote>ತಾಲ್ಲೂಕು ಸಮಿತಿಗಳು ಪ್ರತಿ ತಿಂಗಳು 10 ವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ಕೆಪಿಎಂಇ ಕಾಯ್ದೆಯನ್ವಯ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು. </blockquote><span class="attribution">ನಿತೀಶ್ ಕೆ. ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>