<p><strong>ರಾಯಚೂರು</strong>: ಖಾಸಗಿ ಕಂಪನಿ ಮಾಲಿಕರು, ಗುತ್ತಿಗೆ ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ರೆಡ್ಡಿ ಗುಂಜಹಳ್ಳಿ ಹೇಳಿದರು.</p>.<p>ವಿಶ್ವಕಾರ್ಮಿಕರ ದಿನಾಚರಣೆ ನಿಮಿತ್ತ ಸಿಐಟಿಯುನಿಂದ ಬುಧವಾರ ಏರ್ಪಡಿಸಿದ್ದ ರ್ಯಾಲಿ ಮತ್ತು ಬಹಿರಂಗ ಸಭೆಯಲ್ಲಿ ಮಾತನಾಡಿದರು.</p>.<p>ಕಡಿಮೆ ವೇತನ ನೀಡುವುದರ ಜೊತೆಗೆ ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಸರ್ಕಾರದ ಯಾವುದೇ ಕಾರ್ಮಿಕ ಕಾನೂನುಗಳನ್ನು ಪಾಲಿಸದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುವುದರ ಮೂಲಕ ಬೆದರಿಕೆ ನೀಡುತ್ತಿದ್ದಾರೆ ಎಂದರು.</p>.<p>ಕಾರ್ಮಿಕರ ಹಕ್ಕುಗಳ ಮೇಲೆ ದೊಡ್ಡ ರೀತಿಯ ಗದಾಪ್ರಹಾರ ನಡೆಯುತ್ತಿದೆ. ಸರ್ಕಾರದ ಕಾರ್ಮಿಕ ಅಧಿಕಾರಿಗಳು ಮಧ್ಯಪ್ರವೇಶಿಸಿ ಕಾರ್ಮಿಕರ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ನಿಯಂತ್ರಿಸಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.</p>.<p>ಸಿಐಟಿಯು ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ ನೆರವೇರಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿಮಾ ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಎಂ. ಶರಣಗೌಡ ಮಾತನಾಡಿ, ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಿ ಸರ್ಕಾರ ಮತ್ತು ಖಾಸಗಿ ಕಂಪನಿಗಳ ದೌರ್ಜನ್ಯವನ್ನು ಎದುರಿಸಲು ಮುಂದಾಗಬೇಕು ಎಂದರು.</p>.<p>ಮುಖ್ಯ ಅತಿಥಿ ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ. ರವಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ್, ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷ ಸುಲೋಚನ ಮಾತನಾಡಿದರು.</p>.<p>ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಡಿ.ಎಸ್. ಶರಣಬಸವ ಮಾತನಾಡಿದರು.</p>.<p>ಮಹಾದೇವ ಜಂಬಲದಿನ್ನಿ, ವರಲಕ್ಷ್ಮೀ, ಗುರುರಾಜ ದೇಸಾಯಿ, ಚನ್ನಾರೆಡ್ಡಿ, ಮಲ್ಲಿಕಾರ್ಜುನ, ನಾಗಮ್ಮ, ಕಲ್ಯಾಣಮ್ಮ, ಚನ್ನಬಸವ ಸ್ವಾಮಿ, ಶ್ರೀನಿವಾಸ, ಈರಣ್ಣ ಸ್ವಾಮಿ, ಪಾಲ್ ಪ್ರಸಾದ್, ಮಲ್ಲೇಶ್ ಗಧಾರ್, ಶರಣಪ್ಪ, ಭಾಸ್ಕರ್, ಮಲ್ಲಿಕಾರ್ಜುನ, ಶಕುಂತಲ, ವೆಂಕಟಲಕ್ಷ್ಮೀ ಗುರುನಾಥ, ರಂಗನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಖಾಸಗಿ ಕಂಪನಿ ಮಾಲಿಕರು, ಗುತ್ತಿಗೆ ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ರೆಡ್ಡಿ ಗುಂಜಹಳ್ಳಿ ಹೇಳಿದರು.</p>.<p>ವಿಶ್ವಕಾರ್ಮಿಕರ ದಿನಾಚರಣೆ ನಿಮಿತ್ತ ಸಿಐಟಿಯುನಿಂದ ಬುಧವಾರ ಏರ್ಪಡಿಸಿದ್ದ ರ್ಯಾಲಿ ಮತ್ತು ಬಹಿರಂಗ ಸಭೆಯಲ್ಲಿ ಮಾತನಾಡಿದರು.</p>.<p>ಕಡಿಮೆ ವೇತನ ನೀಡುವುದರ ಜೊತೆಗೆ ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಸರ್ಕಾರದ ಯಾವುದೇ ಕಾರ್ಮಿಕ ಕಾನೂನುಗಳನ್ನು ಪಾಲಿಸದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುವುದರ ಮೂಲಕ ಬೆದರಿಕೆ ನೀಡುತ್ತಿದ್ದಾರೆ ಎಂದರು.</p>.<p>ಕಾರ್ಮಿಕರ ಹಕ್ಕುಗಳ ಮೇಲೆ ದೊಡ್ಡ ರೀತಿಯ ಗದಾಪ್ರಹಾರ ನಡೆಯುತ್ತಿದೆ. ಸರ್ಕಾರದ ಕಾರ್ಮಿಕ ಅಧಿಕಾರಿಗಳು ಮಧ್ಯಪ್ರವೇಶಿಸಿ ಕಾರ್ಮಿಕರ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ನಿಯಂತ್ರಿಸಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.</p>.<p>ಸಿಐಟಿಯು ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ ನೆರವೇರಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿಮಾ ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಎಂ. ಶರಣಗೌಡ ಮಾತನಾಡಿ, ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಿ ಸರ್ಕಾರ ಮತ್ತು ಖಾಸಗಿ ಕಂಪನಿಗಳ ದೌರ್ಜನ್ಯವನ್ನು ಎದುರಿಸಲು ಮುಂದಾಗಬೇಕು ಎಂದರು.</p>.<p>ಮುಖ್ಯ ಅತಿಥಿ ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ. ರವಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ್, ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷ ಸುಲೋಚನ ಮಾತನಾಡಿದರು.</p>.<p>ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಡಿ.ಎಸ್. ಶರಣಬಸವ ಮಾತನಾಡಿದರು.</p>.<p>ಮಹಾದೇವ ಜಂಬಲದಿನ್ನಿ, ವರಲಕ್ಷ್ಮೀ, ಗುರುರಾಜ ದೇಸಾಯಿ, ಚನ್ನಾರೆಡ್ಡಿ, ಮಲ್ಲಿಕಾರ್ಜುನ, ನಾಗಮ್ಮ, ಕಲ್ಯಾಣಮ್ಮ, ಚನ್ನಬಸವ ಸ್ವಾಮಿ, ಶ್ರೀನಿವಾಸ, ಈರಣ್ಣ ಸ್ವಾಮಿ, ಪಾಲ್ ಪ್ರಸಾದ್, ಮಲ್ಲೇಶ್ ಗಧಾರ್, ಶರಣಪ್ಪ, ಭಾಸ್ಕರ್, ಮಲ್ಲಿಕಾರ್ಜುನ, ಶಕುಂತಲ, ವೆಂಕಟಲಕ್ಷ್ಮೀ ಗುರುನಾಥ, ರಂಗನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>