<p><strong>ಮಾನ್ವಿ:</strong> ‘ಕನ್ನಡ ಸಾಹಿತ್ಯ ಪ್ರಕಾರದಲ್ಲಿ ವಿಶಿಷ್ಟವಾಗಿರುವ ಚುಟುಕು ಸಾಹಿತ್ಯ ರಚನೆಗೆ ಪ್ರೋತ್ಸಾಹ ಅಗತ್ಯ" ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚುಟುಕು ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಕಾರ್ಯಚಟುವಟಿಕೆಗಳ ಉದ್ಘಾಟನೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಾಸ್ಯ, ವಿಡಂಬನೆಯ ಚುಟುಕುಗಳ ರಚನೆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಆನಂದ ಜೂಕೂರು ವಿಶೇಷ ಉಪನ್ಯಾಸ ನೀಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರಾದ ನಿವೃತ್ತ ಪಿಎಸ್ಐ ವೀರನಗೌಡ, ನಿವೃತ್ತ ಯೋಧ ಚೆನ್ನಾರೆಡ್ಡಿ, ಕನ್ನಡಪರ ಹೋರಾಟಗಾರ ಸುಭಾನ್ ಬೇಗ್, ಸಮಾಜ ಸೇವಕ ಹನುಮಂತ ಕೋಟೆ, ಎಚ್.ಚಾಂದ್ ಪಾಷಾ ಗುತ್ತೇದಾರ ಮತ್ತಿತರರನ್ನು ಸನ್ಮಾನಿಸಲಾಯಿತು.</p>.<p>ಯುವ ಕವಿಗಳಿಂದ ಚಟುಕು ಕವಿಗೋಷ್ಠಿ ನಡೆಯಿತು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಗರಾವ್ ಸರಕೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ಅಧ್ಯಕ್ಷ ಮಹ್ಮದ್ ಮುಜೀಬ್, ಕಾರ್ಯದರ್ಶಿ ರವಿಶರ್ಮಾ ಜಾನೇಕಲ್, ರಾಜಾ ಮಹೇಂದ್ರ ನಾಯಕ, ಸುರೇಶ ಕುರ್ಡಿ, ಸಂಗಮೇಶ ಮುಧೋಳ, ಬಾಗಯ್ಯ ನಾಯಕ, ಮಧು ಪಾಂಡೆ, ಬಸವರಾಜ ಬ್ಯಾಗವಾಟ, ನಜೀರುದ್ದೀನ್ ಖಾದ್ರಿ, ಮಹಾದೇವಪ್ಪ, ಮೂಕಪ್ಪ ಕಟ್ಟಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ‘ಕನ್ನಡ ಸಾಹಿತ್ಯ ಪ್ರಕಾರದಲ್ಲಿ ವಿಶಿಷ್ಟವಾಗಿರುವ ಚುಟುಕು ಸಾಹಿತ್ಯ ರಚನೆಗೆ ಪ್ರೋತ್ಸಾಹ ಅಗತ್ಯ" ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚುಟುಕು ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಕಾರ್ಯಚಟುವಟಿಕೆಗಳ ಉದ್ಘಾಟನೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಾಸ್ಯ, ವಿಡಂಬನೆಯ ಚುಟುಕುಗಳ ರಚನೆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಆನಂದ ಜೂಕೂರು ವಿಶೇಷ ಉಪನ್ಯಾಸ ನೀಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರಾದ ನಿವೃತ್ತ ಪಿಎಸ್ಐ ವೀರನಗೌಡ, ನಿವೃತ್ತ ಯೋಧ ಚೆನ್ನಾರೆಡ್ಡಿ, ಕನ್ನಡಪರ ಹೋರಾಟಗಾರ ಸುಭಾನ್ ಬೇಗ್, ಸಮಾಜ ಸೇವಕ ಹನುಮಂತ ಕೋಟೆ, ಎಚ್.ಚಾಂದ್ ಪಾಷಾ ಗುತ್ತೇದಾರ ಮತ್ತಿತರರನ್ನು ಸನ್ಮಾನಿಸಲಾಯಿತು.</p>.<p>ಯುವ ಕವಿಗಳಿಂದ ಚಟುಕು ಕವಿಗೋಷ್ಠಿ ನಡೆಯಿತು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಗರಾವ್ ಸರಕೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ಅಧ್ಯಕ್ಷ ಮಹ್ಮದ್ ಮುಜೀಬ್, ಕಾರ್ಯದರ್ಶಿ ರವಿಶರ್ಮಾ ಜಾನೇಕಲ್, ರಾಜಾ ಮಹೇಂದ್ರ ನಾಯಕ, ಸುರೇಶ ಕುರ್ಡಿ, ಸಂಗಮೇಶ ಮುಧೋಳ, ಬಾಗಯ್ಯ ನಾಯಕ, ಮಧು ಪಾಂಡೆ, ಬಸವರಾಜ ಬ್ಯಾಗವಾಟ, ನಜೀರುದ್ದೀನ್ ಖಾದ್ರಿ, ಮಹಾದೇವಪ್ಪ, ಮೂಕಪ್ಪ ಕಟ್ಟಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>