ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ತಾಯಿ ನಿರ್ಲಕ್ಷಿಸಿದ ಪುತ್ರನ ಆಸ್ತಿ ವಾಪಸ್ಸಿಗೆ ಆದೇಶ

Last Updated 6 ಆಗಸ್ಟ್ 2020, 19:50 IST
ಅಕ್ಷರ ಗಾತ್ರ

ರಾಯಚೂರು: ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಕಾರಣಕ್ಕಾಗಿ, ಪುತ್ರನ ಪಿತ್ರಾರ್ಜಿತ ಆಸ್ತಿಯನ್ನು ತಾಯಿಯ ಹೆಸರಿಗೆ ವರ್ಗಾಯಿಸುವಂತೆ ಇಲ್ಲಿಯ ಉಪ ವಿಭಾಗಾಧಿಕಾರಿ ನ್ಯಾಯಾಲಯ ಆದೇಶಿಸಿದೆ.

ಸಿರವಾರ ತಾಲ್ಲೂಕು ಕವಿತಾಳದ ಖತೇಜಾ ಬೇಗಂ ಅವರು, ‘ನನ್ನ ಮಗ ಹುಸೇನ್‌ಬಾಷಾ ಪಿತ್ರಾರ್ಜಿತವಾಗಿ ಬಂದಿದ್ದ 3 ಎಕರೆ 28 ಗುಂಟೆ ಜಮೀನನ್ನು 2015ರಲ್ಲಿ ತನ್ನ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾನೆ. ಆದರೆ, ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ಜಮೀನನ್ನು ನನ್ನ ಹೆಸರಿಗೆ ವರ್ಗಾಯಿಸಬೇಕು’ ಎಂದು ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ರಾಯಚೂರು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಅವರು, ‘ಪಾಲಕರ ಪೋಷಣೆ, ಸಂರಕ್ಷಣೆ, ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ–2007’ರ ಅಡಿಯಲ್ಲಿ ಆಸ್ತಿ ನೋಂದಣಿಯನ್ನು ರದ್ದುಗೊಳಿಸಿ ತಾಯಿ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಗುರುವಾರ ಆದೇಶ ನೀಡಿದ್ದಾರೆ.

ಉಪವಿಭಾಗಾಧಿಕಾರಿ ಜುಲೈ 27ರಂದು ವಿಚಾರಣೆ ನಿಗದಿ ಮಾಡಿದ್ದರೂ ಹುಸೇನ್ ಬಾಷಾ ವಿಚಾರಣೆಗೆ ಹಾಜರಾಗಿರಲಿಲ್ಲ. ಆ. 4ರಂದು ವಿಚಾರಣೆ ಪೂರ್ಣಗೊಳಿಸಿ, ಆ. 6ರಂದು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT