ಪರಮೇಶ್ವರ ಕೂಡಾ ಬಿಡುವು ದೊರೆತಾಗ ದಿವಿತ್ಗೆ ಕರೆ ಮಾಡಿ ಮಾತನಾಡುತ್ತಿದ್ದರು. ಅಲ್ಲದೆ, ಅವರ ಮನೆಗೂ ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆ ಕೆಲ ಸಮಯ ಕಳೆದಿದ್ದರು. ಅಲ್ಲದೆ, ಸಚಿವರ ವಿಶೇಷಾಧಿಕಾರಿಯಾಗಿದ್ದ ದಿನೇಶ್ ಗೂಳೀಗೌಡ ಕೂಡಾ ಆಗಾಗ ದಿವಿತ್ಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸುತ್ತಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.