<p><strong>ಲಿಂಗಸುಗೂರು</strong>: ಡೀಸೆಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಸ್ಫ್ಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಬುಧವಾರ ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿ ಶಾಲಂಸಾಬ ಅವರ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದ ಅವರು, ತೈಲ ಬೆಲೆಗಳು ಹೆಚ್ಚುತ್ತಲೇ ಇದ್ದು, ಇದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರ ಸರ್ಕಾರವು ಕೂಡಲೇ ಅಡುಗೆ ಅನಿಲದ ಬೆಲೆಯನ್ನು ಇಳಿಸಬೇಕು. ತೈಲಗಳ ಮೇಲೆ ವಿಧಿಸುವ ತೆರಿಗೆ ಕಡಿತಗೊಳಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಸದಂತೆ ಮಧ್ಯಸ್ಥಿಕೆ ವಹಿಸಬೇಕು. ಇಲ್ಲದೆ ಹೋದಲ್ಲಿ ರಾಷ್ಟ್ರವ್ಯಾಪಿ ತೈಲ ಬೆಲೆ ಏರಿಕೆ ವಿರೋಧಿ ಜನಾಂದೋಲನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ರಮೇಶ ವೀರಾಪುರ, ವಿರೇಶ ಸಿಕ್ಕ ಉಪ್ಪೇರಿ, ಶರಣಬಸವ, ಶಿವರಾಜ, ಹುಸೇನಪ್ಪ ಕಡೆಮನಿ, ಯಂಕಪ್ಪ ನಿಲೋಗಲ್, ಅಮರೇಶ ನಿಲೋಗಲ್, ಹುಸೇನಸಾಬ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ಡೀಸೆಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಸ್ಫ್ಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಬುಧವಾರ ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿ ಶಾಲಂಸಾಬ ಅವರ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದ ಅವರು, ತೈಲ ಬೆಲೆಗಳು ಹೆಚ್ಚುತ್ತಲೇ ಇದ್ದು, ಇದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರ ಸರ್ಕಾರವು ಕೂಡಲೇ ಅಡುಗೆ ಅನಿಲದ ಬೆಲೆಯನ್ನು ಇಳಿಸಬೇಕು. ತೈಲಗಳ ಮೇಲೆ ವಿಧಿಸುವ ತೆರಿಗೆ ಕಡಿತಗೊಳಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಸದಂತೆ ಮಧ್ಯಸ್ಥಿಕೆ ವಹಿಸಬೇಕು. ಇಲ್ಲದೆ ಹೋದಲ್ಲಿ ರಾಷ್ಟ್ರವ್ಯಾಪಿ ತೈಲ ಬೆಲೆ ಏರಿಕೆ ವಿರೋಧಿ ಜನಾಂದೋಲನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ರಮೇಶ ವೀರಾಪುರ, ವಿರೇಶ ಸಿಕ್ಕ ಉಪ್ಪೇರಿ, ಶರಣಬಸವ, ಶಿವರಾಜ, ಹುಸೇನಪ್ಪ ಕಡೆಮನಿ, ಯಂಕಪ್ಪ ನಿಲೋಗಲ್, ಅಮರೇಶ ನಿಲೋಗಲ್, ಹುಸೇನಸಾಬ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>