<p><strong>ರಾಯಚೂರು: </strong>ತುಂಗಭದ್ರ ಎಡದಂಡೆ ಕಾಲುವೆ (ಟಿಎಲ್ಬಿಸಿ) ಅಕ್ರಮ ನೀರಾವರಿ ತಡೆಯುವುದಕ್ಕಾಗಿ ಆಗಸ್ಟ್ 6 ರಿಂದ ಪಕ್ಷಾತೀತವಾಗಿ ಅಹಿಂಸಾತ್ಮಕ ಮಾರ್ಗದಲ್ಲಿ ಹೋರಾಟ ಮಾಡುವುದಕ್ಕೆ ತುಂಗಭದ್ರಾ ಎಡದಂಡೆ ಕಾಲುವೆ ಹಿತರಕ್ಷಣಾ ಸಮಿತಿ ನಿರ್ಧರಿಸಿತು.</p>.<p>ನಗರದ ಜೆಸಿ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಿದರು. ಶಾಸಕ ಬಸನಗೌಡ ದದ್ದಲ, ಕಾಂಗ್ರೆಸ್ ಮುಖಂಡ ಹಂಪಯ್ಯ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ಬಿಜೆಪಿ ಮುಖಂಡರಾದ ಬಸನಗೌಡ ಬ್ಯಾಗವಾಟ್, ಶರಣಪ್ಪಗೌಡ ಜಾಡಲದಿನ್ನಿ, ನಾಗನಗೌಡ ಹರವಿ ಭಾಗವಹಿಸಿದ್ದರು.</p>.<p>ಪ್ರತಿ ಕಾಲುವೆಯಿಂದಲೂ ನೂರಾರು ರೈತರನ್ನು ಹೋರಾಟಕ್ಕೆ ಕರೆ ತರಬೇಕು. ಮೆರವಣಿಗೆ ಉದ್ದಕ್ಕೂ ಸಕಲ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಯೋಜಿಸಲಾಯಿತು. 15 ದಿನಗಳವರೆಗೂ ನಿರಂತರ ಹೋರಾಟ ಮುಂದುವರಿಯುತ್ತದೆ ಎಂದು ಸಮಿತಿ ಸಂಚಾಲಕ ರಾಘವೇಂದ್ರ ಕುಷ್ಟಗಿ ಅವರು ತಿಳಿಸಿದರು.</p>.<p>ಅಕ್ರಮ ನೀರಾವರಿಯಲ್ಲಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ ಸೇರಿದಂತೆ ಅನೇಕ ಪ್ರಭಾವಿಗಳಿದ್ದಾರೆ. 6 ರಿಂದ ನಡೆಯುವ ಹೋರಾಟವನ್ನು ಯಶಸ್ವಿ ಮಾಡಬೇಕಿದೆ ಎಂದು ರೈತ ಮುಖಂಡ ಚಾಮರಸ ಮಾಲಿಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ತುಂಗಭದ್ರ ಎಡದಂಡೆ ಕಾಲುವೆ (ಟಿಎಲ್ಬಿಸಿ) ಅಕ್ರಮ ನೀರಾವರಿ ತಡೆಯುವುದಕ್ಕಾಗಿ ಆಗಸ್ಟ್ 6 ರಿಂದ ಪಕ್ಷಾತೀತವಾಗಿ ಅಹಿಂಸಾತ್ಮಕ ಮಾರ್ಗದಲ್ಲಿ ಹೋರಾಟ ಮಾಡುವುದಕ್ಕೆ ತುಂಗಭದ್ರಾ ಎಡದಂಡೆ ಕಾಲುವೆ ಹಿತರಕ್ಷಣಾ ಸಮಿತಿ ನಿರ್ಧರಿಸಿತು.</p>.<p>ನಗರದ ಜೆಸಿ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಿದರು. ಶಾಸಕ ಬಸನಗೌಡ ದದ್ದಲ, ಕಾಂಗ್ರೆಸ್ ಮುಖಂಡ ಹಂಪಯ್ಯ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ಬಿಜೆಪಿ ಮುಖಂಡರಾದ ಬಸನಗೌಡ ಬ್ಯಾಗವಾಟ್, ಶರಣಪ್ಪಗೌಡ ಜಾಡಲದಿನ್ನಿ, ನಾಗನಗೌಡ ಹರವಿ ಭಾಗವಹಿಸಿದ್ದರು.</p>.<p>ಪ್ರತಿ ಕಾಲುವೆಯಿಂದಲೂ ನೂರಾರು ರೈತರನ್ನು ಹೋರಾಟಕ್ಕೆ ಕರೆ ತರಬೇಕು. ಮೆರವಣಿಗೆ ಉದ್ದಕ್ಕೂ ಸಕಲ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಯೋಜಿಸಲಾಯಿತು. 15 ದಿನಗಳವರೆಗೂ ನಿರಂತರ ಹೋರಾಟ ಮುಂದುವರಿಯುತ್ತದೆ ಎಂದು ಸಮಿತಿ ಸಂಚಾಲಕ ರಾಘವೇಂದ್ರ ಕುಷ್ಟಗಿ ಅವರು ತಿಳಿಸಿದರು.</p>.<p>ಅಕ್ರಮ ನೀರಾವರಿಯಲ್ಲಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ ಸೇರಿದಂತೆ ಅನೇಕ ಪ್ರಭಾವಿಗಳಿದ್ದಾರೆ. 6 ರಿಂದ ನಡೆಯುವ ಹೋರಾಟವನ್ನು ಯಶಸ್ವಿ ಮಾಡಬೇಕಿದೆ ಎಂದು ರೈತ ಮುಖಂಡ ಚಾಮರಸ ಮಾಲಿಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>