<p><strong>ರಾಯಚೂರು:</strong> ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಘಟನೆಯನ್ನು ಖಂಡಿಸಿ, ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಸೋಮವಾರ ಮನವಿ ಸಲ್ಲಿಸಿದವು.</p>.<p>ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ: ಉತ್ತರಪ್ರದೇಶದ ಹಾಥರಸ್ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಆಡಳಿತದಲ್ಲಿ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಬೀದಿಬೀದಿಗಳಲ್ಲಿ ಕೊಲೆ ಆಗುತ್ತಿವೆ. ಅತ್ಯಾಚಾರ, ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾದ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.</p>.<p>ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ, ಸಂಘಟನಾ ಸಂಚಾಲಕರಾದ ಶರಣಪ್ಪ ದಿನ್ನಿ, ಚಿದಾನಂದ ಅರೋಲಿ, ಪರಶುರಾಮ ಅರೋಲಿ, ಚನ್ನಬಸವ ಯಕ್ಲಾಸಪುರ, ನಾಗರಾಜ ಹಾಲಭಾವಿ ಮತ್ತಿತರರು ಇದ್ದರು.</p>.<p>ಸಿಪಿಐ(ಎಂ) ಜಂಟಿ ಸಂಘಟನೆಗಳು: ಪರಿಶಿಷ್ಟರಿಗೆ ರಕ್ಷಣೆ ಕೊಡುವಲ್ಲಿ ವಿಫಲವಾಗಿರುವ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘ, ದೇವದಾಸಿ ಮಹಿಳಾ ವಿಮೋಚನಾ ಸಂಘ, ದಲಿತ ಹಕ್ಕುಗಳ ಸಮಿತಿ, ಸಿಪಿಐ (ಎಂ) ಜಂಟಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ರಾಯಚೂರಿನ ಮಾನ್ವಿಯಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ತಹಶೀಲ್ದಾರ್ರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಎಚ್.ಪದ್ಮಾ, ಕೆ.ಜಿ.ವೀರೇಶ, ಪಾರ್ವತಿ, ಜೆ.ತಾಯಮ್ಮ ನೇತೃತ್ವ ವಹಿಸಿದ್ದರು.</p>.<p>ಎಸ್ಯುಸಿಐ:ಹಾಥರಸ್ನಲ್ಲಿ ಯುವತಿಗೆ ಕೊಲೆಗೆ ಕಾರಣವಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಸೋಷಿಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ–ಸಿ)ದಿಂದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಮಹೇಶ ಚೀಕಲಪರ್ವಿ, ಚನ್ನಬಸವ ಜಾನೇಕಲ್, ಮಲ್ಲನಗೌಡ, ಎನ್.ಎಸ್.ವೀರೇಶ್, ವಿನೋದ, ಅಪೂರ್ವ, ಗಾಯತ್ರಿ ಮತ್ತಿತರರು ಇದ್ದರು.</p>.<p>ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ: ಪರಿಶಿಷ್ಟ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>ತೆಲಂಗಾಣದಲ್ಲಿ ಇಂತಹದೊಂದು ಘಟನೆ ನಡೆದಾಗ, ಅಲ್ಲಿನ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಉತ್ತರಪ್ರದೇಶದಲ್ಲಿಯೂ ತೆಗೆದುಕೊಂಡು ಯುವತಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರಭು ಹುಲಿನಾಯಕ, ಗುರುನಾಥ, ಯಲ್ಲಪ್ಪ ಜಾಲಿಬೆಂಚಿ, ಪ್ರಭು ತುರಾಯಿ, ಗೋಪಾಲ, ತಿಮ್ಮಪ್ಪ, ಮರಿಸ್ವಾಮಿ, ತನುಜಾ, ಲಕ್ಷ್ಮೀ ಇತರರು ಇದ್ದರು.</p>.<p>ಕರ್ನಾಟಕ ದಲಿತ ಮಹಿಳಾ ಮುಖಂಡರ ವೇದಿಕೆ: ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಮಹಿಳಾ ಮುಖಂಡರ ವೇದಿಕೆಯಿಂದ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>ವಿಜಯರಾಣಿ, ಭಾಗ್ಯಮ್ಮ ಸಿರವಾರ, ಶಿವಮ್ಮ, ಅಮರಮ್ಮ, ಸಂಗಮ್ಮರೆಡ್ಡಿ, ಹನುಮಂತಿ ಮತ್ತಿತರರು ಇದ್ದರು.</p>.<p>ಮಾನವ ಹಕ್ಕುಗಳ ಪರಿಷತ್: ಹಾಥರಸ್ನಲ್ಲಿ ಪರಿಶಿಷ್ಟ ಯುವತಿ ಮೇಲೆ ಅತ್ಯಾಚಾರ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.</p>.<p>ಸಂತ್ರಸ್ತೆಯ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಕೋರಿದರು.</p>.<p>ಸೈಯದ್ ಜಲಾಲ್, ಮೊಹ್ಮದ್ ಅಮೀರ್ಖಾನ್, ಅನ್ವರ್ಖಾನ್, ವಕೀಲ ತಾಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಘಟನೆಯನ್ನು ಖಂಡಿಸಿ, ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಸೋಮವಾರ ಮನವಿ ಸಲ್ಲಿಸಿದವು.</p>.<p>ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ: ಉತ್ತರಪ್ರದೇಶದ ಹಾಥರಸ್ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಆಡಳಿತದಲ್ಲಿ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಬೀದಿಬೀದಿಗಳಲ್ಲಿ ಕೊಲೆ ಆಗುತ್ತಿವೆ. ಅತ್ಯಾಚಾರ, ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾದ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.</p>.<p>ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ, ಸಂಘಟನಾ ಸಂಚಾಲಕರಾದ ಶರಣಪ್ಪ ದಿನ್ನಿ, ಚಿದಾನಂದ ಅರೋಲಿ, ಪರಶುರಾಮ ಅರೋಲಿ, ಚನ್ನಬಸವ ಯಕ್ಲಾಸಪುರ, ನಾಗರಾಜ ಹಾಲಭಾವಿ ಮತ್ತಿತರರು ಇದ್ದರು.</p>.<p>ಸಿಪಿಐ(ಎಂ) ಜಂಟಿ ಸಂಘಟನೆಗಳು: ಪರಿಶಿಷ್ಟರಿಗೆ ರಕ್ಷಣೆ ಕೊಡುವಲ್ಲಿ ವಿಫಲವಾಗಿರುವ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘ, ದೇವದಾಸಿ ಮಹಿಳಾ ವಿಮೋಚನಾ ಸಂಘ, ದಲಿತ ಹಕ್ಕುಗಳ ಸಮಿತಿ, ಸಿಪಿಐ (ಎಂ) ಜಂಟಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ರಾಯಚೂರಿನ ಮಾನ್ವಿಯಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ತಹಶೀಲ್ದಾರ್ರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.</p>.<p>ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಎಚ್.ಪದ್ಮಾ, ಕೆ.ಜಿ.ವೀರೇಶ, ಪಾರ್ವತಿ, ಜೆ.ತಾಯಮ್ಮ ನೇತೃತ್ವ ವಹಿಸಿದ್ದರು.</p>.<p>ಎಸ್ಯುಸಿಐ:ಹಾಥರಸ್ನಲ್ಲಿ ಯುವತಿಗೆ ಕೊಲೆಗೆ ಕಾರಣವಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಸೋಷಿಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ–ಸಿ)ದಿಂದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಮಹೇಶ ಚೀಕಲಪರ್ವಿ, ಚನ್ನಬಸವ ಜಾನೇಕಲ್, ಮಲ್ಲನಗೌಡ, ಎನ್.ಎಸ್.ವೀರೇಶ್, ವಿನೋದ, ಅಪೂರ್ವ, ಗಾಯತ್ರಿ ಮತ್ತಿತರರು ಇದ್ದರು.</p>.<p>ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ: ಪರಿಶಿಷ್ಟ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>ತೆಲಂಗಾಣದಲ್ಲಿ ಇಂತಹದೊಂದು ಘಟನೆ ನಡೆದಾಗ, ಅಲ್ಲಿನ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಉತ್ತರಪ್ರದೇಶದಲ್ಲಿಯೂ ತೆಗೆದುಕೊಂಡು ಯುವತಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರಭು ಹುಲಿನಾಯಕ, ಗುರುನಾಥ, ಯಲ್ಲಪ್ಪ ಜಾಲಿಬೆಂಚಿ, ಪ್ರಭು ತುರಾಯಿ, ಗೋಪಾಲ, ತಿಮ್ಮಪ್ಪ, ಮರಿಸ್ವಾಮಿ, ತನುಜಾ, ಲಕ್ಷ್ಮೀ ಇತರರು ಇದ್ದರು.</p>.<p>ಕರ್ನಾಟಕ ದಲಿತ ಮಹಿಳಾ ಮುಖಂಡರ ವೇದಿಕೆ: ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಮಹಿಳಾ ಮುಖಂಡರ ವೇದಿಕೆಯಿಂದ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>ವಿಜಯರಾಣಿ, ಭಾಗ್ಯಮ್ಮ ಸಿರವಾರ, ಶಿವಮ್ಮ, ಅಮರಮ್ಮ, ಸಂಗಮ್ಮರೆಡ್ಡಿ, ಹನುಮಂತಿ ಮತ್ತಿತರರು ಇದ್ದರು.</p>.<p>ಮಾನವ ಹಕ್ಕುಗಳ ಪರಿಷತ್: ಹಾಥರಸ್ನಲ್ಲಿ ಪರಿಶಿಷ್ಟ ಯುವತಿ ಮೇಲೆ ಅತ್ಯಾಚಾರ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.</p>.<p>ಸಂತ್ರಸ್ತೆಯ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಕೋರಿದರು.</p>.<p>ಸೈಯದ್ ಜಲಾಲ್, ಮೊಹ್ಮದ್ ಅಮೀರ್ಖಾನ್, ಅನ್ವರ್ಖಾನ್, ವಕೀಲ ತಾಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>