<p><strong>ರಾಯಚೂರು</strong>: ತಾಲ್ಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 2023-2024 ಹಾಗೂ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಕಾಮಗಾರಿ ನಿರ್ವಹಿಸದೇ ಅನುದಾನ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಜಾಗೃತಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒಗೆ ಮನವಿ ಸಲ್ಲಿಸಿದರು. ರಾಯಚೂರು ತಾಲ್ಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲ ಕಾಮಗಾರಿಗಳನ್ನೇ ಮಾಡಿಲ್ಲ. ಬೋಗಸ್ ಬಿಲ್ಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಬಿಜನಗೇರಾ ಪಿಡಿಒ ಹಾಗೂ ಅಧ್ಯಕ್ಷರು ಸೇರಿ ನಕಲಿ ಬಿಲ್ಗಳನ್ನು ಸೃಷ್ಟಿಸಿ 15ನೇ ಹಣಕಾಸಿನ ಯೋಜನೆಯ ಕಾಮಗಾರಿಗಳಲ್ಲೂ ಅವ್ಯವಹಾರ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು. ಪಿಡಿಒ ವರ್ಗಾವಣೆ ಮಾಡಬೇಕು. ನರೇಗಾ ಯೋಜನೆಯಡಿ ಎರಡು ವರ್ಷಗಳಿಂದ ನಡೆದ ಎಲ್ಲ ಕಾಮಗಾರಿಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ರಾಜಾಧ್ಯಕ್ಷ ಅಬ್ರಾಹಂ ಜಾಗೀರಪನ್ನೂರು, ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಂದ್ರ, ದೇವೇಂದ್ರ ಯಾದವ, ಪದಾಧಿಕಾರಿಗಳಾದ ಕೃಷ್ಣಶಾಸ್ತ್ರೀ, ಎಸ್.ರವಿ ಹಾಗೂ ಪ್ರಶಾಂತ್ ಗುಡಹಾಳ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ತಾಲ್ಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 2023-2024 ಹಾಗೂ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಕಾಮಗಾರಿ ನಿರ್ವಹಿಸದೇ ಅನುದಾನ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಜಾಗೃತಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒಗೆ ಮನವಿ ಸಲ್ಲಿಸಿದರು. ರಾಯಚೂರು ತಾಲ್ಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲ ಕಾಮಗಾರಿಗಳನ್ನೇ ಮಾಡಿಲ್ಲ. ಬೋಗಸ್ ಬಿಲ್ಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಬಿಜನಗೇರಾ ಪಿಡಿಒ ಹಾಗೂ ಅಧ್ಯಕ್ಷರು ಸೇರಿ ನಕಲಿ ಬಿಲ್ಗಳನ್ನು ಸೃಷ್ಟಿಸಿ 15ನೇ ಹಣಕಾಸಿನ ಯೋಜನೆಯ ಕಾಮಗಾರಿಗಳಲ್ಲೂ ಅವ್ಯವಹಾರ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು. ಪಿಡಿಒ ವರ್ಗಾವಣೆ ಮಾಡಬೇಕು. ನರೇಗಾ ಯೋಜನೆಯಡಿ ಎರಡು ವರ್ಷಗಳಿಂದ ನಡೆದ ಎಲ್ಲ ಕಾಮಗಾರಿಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಂಘದ ರಾಜಾಧ್ಯಕ್ಷ ಅಬ್ರಾಹಂ ಜಾಗೀರಪನ್ನೂರು, ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಂದ್ರ, ದೇವೇಂದ್ರ ಯಾದವ, ಪದಾಧಿಕಾರಿಗಳಾದ ಕೃಷ್ಣಶಾಸ್ತ್ರೀ, ಎಸ್.ರವಿ ಹಾಗೂ ಪ್ರಶಾಂತ್ ಗುಡಹಾಳ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>