<p><strong>ಕವಿತಾಳ</strong>: ‘ಸ್ಥಳೀಯ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವೆಂಕಟೇಶ ನಾಯಕ ಅವರ ಅಮಾನತಿಗೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಸೋಮವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ದಲಿತ ಸಂಘಟನೆ ಮುಖಂಡ ಅರಳಪ್ಪ ತುಪ್ಪದೂರು ಹೇಳಿದರು.</p>.<p>‘ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ನೊಂದು ಠಾಣೆಗೆ ಬರುವ ದಲಿತರಿಗೆ ನ್ಯಾಯ ಒದಗಿಸುವ ಬದಲು, ಪಿಎಸ್ಐ ಅವರು ದಲಿತರ ವಿರುದ್ದವೇ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ಪರಿಷ್ಠಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ನಾಲ್ವರು ಶಾಸಕರು ಮತ್ತು ಸಂಸದರ ಕುಮ್ಮಕ್ಕಿನಿಂದ ಕ್ರಮ ಜರುಗಿಸುತ್ತಿಲ್ಲ’ ಎಂದು ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಸೋಮವಾರ ನಡೆಯುವ ಪ್ರತಿಭಟನೆಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಂಘಟನೆ ಮುಖಂಡರು ಪಾಲ್ಗೊಳ್ಳಲಿದ್ದು ಪಿಎಸ್ಐ ವಿರುದ್ಧ ಕ್ರಮಕೈಗೊಳ್ಳುವವರೆಗೆ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ದಲಿತ ಹಾಗೂ ಪ್ರಗತಿ ಪರ ಹೋರಾಟ ಸಂಘಟನೆ ಮುಖಂಡರಾದ ಅಲ್ಲಮಪ್ರಭು, ಚಂದ್ರು, ಜೋಸೆಫ್ ತೋರಣದಿನ್ನಿ, ಗಂಗಪ್ಪ, ರಮೇಶ ಇರಬಗೇರ, ಬಾಲಸ್ವಾಮಿ ಜಿನ್ನಾಪುರ, ಸಂತೋಷ ಕಲಶೆಟ್ಟಿ, ಮೌನೇಶ, ಹುಚ್ಚಪ್ಪ, ಲಾಳ್ಳೆಪ್ಪ, ರಿಯಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ‘ಸ್ಥಳೀಯ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವೆಂಕಟೇಶ ನಾಯಕ ಅವರ ಅಮಾನತಿಗೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಸೋಮವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ದಲಿತ ಸಂಘಟನೆ ಮುಖಂಡ ಅರಳಪ್ಪ ತುಪ್ಪದೂರು ಹೇಳಿದರು.</p>.<p>‘ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ನೊಂದು ಠಾಣೆಗೆ ಬರುವ ದಲಿತರಿಗೆ ನ್ಯಾಯ ಒದಗಿಸುವ ಬದಲು, ಪಿಎಸ್ಐ ಅವರು ದಲಿತರ ವಿರುದ್ದವೇ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ಪರಿಷ್ಠಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ನಾಲ್ವರು ಶಾಸಕರು ಮತ್ತು ಸಂಸದರ ಕುಮ್ಮಕ್ಕಿನಿಂದ ಕ್ರಮ ಜರುಗಿಸುತ್ತಿಲ್ಲ’ ಎಂದು ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಸೋಮವಾರ ನಡೆಯುವ ಪ್ರತಿಭಟನೆಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಂಘಟನೆ ಮುಖಂಡರು ಪಾಲ್ಗೊಳ್ಳಲಿದ್ದು ಪಿಎಸ್ಐ ವಿರುದ್ಧ ಕ್ರಮಕೈಗೊಳ್ಳುವವರೆಗೆ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ದಲಿತ ಹಾಗೂ ಪ್ರಗತಿ ಪರ ಹೋರಾಟ ಸಂಘಟನೆ ಮುಖಂಡರಾದ ಅಲ್ಲಮಪ್ರಭು, ಚಂದ್ರು, ಜೋಸೆಫ್ ತೋರಣದಿನ್ನಿ, ಗಂಗಪ್ಪ, ರಮೇಶ ಇರಬಗೇರ, ಬಾಲಸ್ವಾಮಿ ಜಿನ್ನಾಪುರ, ಸಂತೋಷ ಕಲಶೆಟ್ಟಿ, ಮೌನೇಶ, ಹುಚ್ಚಪ್ಪ, ಲಾಳ್ಳೆಪ್ಪ, ರಿಯಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>