ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿ, ದೇಶದಾದ್ಯಂತ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು ಮತ್ತೊಂದೆಡೆ ಕೋವಿಡ್-19 ನಿಂದ ಸಂಕಷ್ಟ ಎದುರಿಸುತ್ತಿರುವ ಮಧ್ಯೆ ಇದನ್ನು ಸಮರ್ಥವಾಗಿ ನಿಭಾಯಿಸದ ಸರ್ಕಾರ ಜನವಿರೋಧಿ ನೀತಿ ಅನುಸರಿಸಿ ಕಾರ್ಪೋರೆಟ್ ಕಂಪನಿಗಳಿಗೆ ಲಾಭ ಮಾಡಿಕೊಡಲು ಮುಂದಾಗಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ವರಲಕ್ಷ್ಮೀ, ಕೆ.ಜಿ.ವೀರೆಶ, ಡಿ.ಎಸ್. ಶರಣಬಸವ, ರಂಗನಗೌಡ, ಎಚ್.ಪದ್ಮಾ, ಪ್ರವೀಣ ರೆಡ್ಡಿ, ಶಂಕ್ರಪ್ಪ, ನರಸಯ್ಯ, ತಿಮ್ಮಪ್ಪ ಇದ್ದರು.