<p><strong>ಸಿಂಧನೂರು:</strong> ‘ತಾಲ್ಲೂಕಿನ ತುಂಗಭದ್ರಾ ಜಲಾಶಯದ ಎಡದಂಡೆ ವ್ಯಾಪ್ತಿಯ 40ನೇ ವಿತರಣಾ ಕಾಲುವೆಯ ಕೆಳಭಾಗದಲ್ಲಿ ಜಮೀನಿನಲ್ಲಿ ಬೆಳೆದ ಜೋಳದ ಬೆಳೆ ತಕ್ಷಣ ನೀರು ಪೂರೈಸಬೇಕು’ ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಘಟಕದ ವತಿಯಿಂದ ಗುರುವಾರ ಸ್ಥಳೀಯ ಮಿನಿವಿಧಾನಸೌಧ ಮುಂದೆ ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>‘ರೈತರು ನಿರಂತರವಾಗಿ ನೀರಿಗಾಗಿ ತಹಶೀಲ್ದಾರ್ ಕಚೇರಿ ಮತ್ತು ನೀರಾವರಿ ಇಲಾಖೆಗೆ ಅಲೆದಾಡಿದರೂ ನೀರು ಹರಿಸಿಲ್ಲ. ನ.3 ರಿಂದ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಕುಳಿತುಕೊಳ್ಳುತ್ತೇವೆ’ ಎಂದು ಕಿಸಾನ್ ಸಭಾ ಸಂಚಾಲಕ ವೆಂಕನಗೌಡ ಗದ್ರಟಗಿ ತಿಳಿಸಿದರು.</p>.<p>ಕಿಸಾನ್ ಸಭಾ ಸಹಸಂಚಾಲಕ ಬಾಬರ್ ಪಟೇಲ್, ಮುಖಂಡರಾದ ಶಾಂತಯ್ಯಸ್ವಾಮಿ, ಸಣ್ಣ ಈರಪ್ಪ ಪೂಜಾರ್, ಹೊಳೆಯಪ್ಪ, ಹೊನ್ನೂರು ಅಲಿ, ಮೌಲಾಸಾಬ, ನಿಂಗಪ್ಪ ಗಾಳಿ, ಚಾಂದ್ ಪಟೇಲ್, ಯಲ್ಲಪ್ಪ ಕಲ್ಲೂರು, ಬುಡ್ಡಾಸಾಬ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ‘ತಾಲ್ಲೂಕಿನ ತುಂಗಭದ್ರಾ ಜಲಾಶಯದ ಎಡದಂಡೆ ವ್ಯಾಪ್ತಿಯ 40ನೇ ವಿತರಣಾ ಕಾಲುವೆಯ ಕೆಳಭಾಗದಲ್ಲಿ ಜಮೀನಿನಲ್ಲಿ ಬೆಳೆದ ಜೋಳದ ಬೆಳೆ ತಕ್ಷಣ ನೀರು ಪೂರೈಸಬೇಕು’ ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಘಟಕದ ವತಿಯಿಂದ ಗುರುವಾರ ಸ್ಥಳೀಯ ಮಿನಿವಿಧಾನಸೌಧ ಮುಂದೆ ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>‘ರೈತರು ನಿರಂತರವಾಗಿ ನೀರಿಗಾಗಿ ತಹಶೀಲ್ದಾರ್ ಕಚೇರಿ ಮತ್ತು ನೀರಾವರಿ ಇಲಾಖೆಗೆ ಅಲೆದಾಡಿದರೂ ನೀರು ಹರಿಸಿಲ್ಲ. ನ.3 ರಿಂದ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಕುಳಿತುಕೊಳ್ಳುತ್ತೇವೆ’ ಎಂದು ಕಿಸಾನ್ ಸಭಾ ಸಂಚಾಲಕ ವೆಂಕನಗೌಡ ಗದ್ರಟಗಿ ತಿಳಿಸಿದರು.</p>.<p>ಕಿಸಾನ್ ಸಭಾ ಸಹಸಂಚಾಲಕ ಬಾಬರ್ ಪಟೇಲ್, ಮುಖಂಡರಾದ ಶಾಂತಯ್ಯಸ್ವಾಮಿ, ಸಣ್ಣ ಈರಪ್ಪ ಪೂಜಾರ್, ಹೊಳೆಯಪ್ಪ, ಹೊನ್ನೂರು ಅಲಿ, ಮೌಲಾಸಾಬ, ನಿಂಗಪ್ಪ ಗಾಳಿ, ಚಾಂದ್ ಪಟೇಲ್, ಯಲ್ಲಪ್ಪ ಕಲ್ಲೂರು, ಬುಡ್ಡಾಸಾಬ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>