ಸಿಂಧನೂರು: ‘ತಾಲ್ಲೂಕಿನ ತುಂಗಭದ್ರಾ ಜಲಾಶಯದ ಎಡದಂಡೆ ವ್ಯಾಪ್ತಿಯ 40ನೇ ವಿತರಣಾ ಕಾಲುವೆಯ ಕೆಳಭಾಗದಲ್ಲಿ ಜಮೀನಿನಲ್ಲಿ ಬೆಳೆದ ಜೋಳದ ಬೆಳೆ ತಕ್ಷಣ ನೀರು ಪೂರೈಸಬೇಕು’ ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಘಟಕದ ವತಿಯಿಂದ ಗುರುವಾರ ಸ್ಥಳೀಯ ಮಿನಿವಿಧಾನಸೌಧ ಮುಂದೆ ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.
‘ರೈತರು ನಿರಂತರವಾಗಿ ನೀರಿಗಾಗಿ ತಹಶೀಲ್ದಾರ್ ಕಚೇರಿ ಮತ್ತು ನೀರಾವರಿ ಇಲಾಖೆಗೆ ಅಲೆದಾಡಿದರೂ ನೀರು ಹರಿಸಿಲ್ಲ. ನ.3 ರಿಂದ ಮಿನಿವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಕುಳಿತುಕೊಳ್ಳುತ್ತೇವೆ’ ಎಂದು ಕಿಸಾನ್ ಸಭಾ ಸಂಚಾಲಕ ವೆಂಕನಗೌಡ ಗದ್ರಟಗಿ ತಿಳಿಸಿದರು.