ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ: ‍ಪ್ರತಿಭಟನೆ

Last Updated 3 ಜುಲೈ 2022, 14:11 IST
ಅಕ್ಷರ ಗಾತ್ರ

ರಾಯಚೂರು: ಮಾಜಿ ಶಾಸಕ ಕೆ.ಕೆ.ಎಲ್. ರಾಜಣ್ಣ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರಾಜಣ್ಣ ಅವರ ಪ್ರತಿಕೃತಿ ದಹಿಸಿ ‍ಪ್ರತಿಭಟನೆ ನಡೆಸಿದರು.

ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಈ ಭಾಗದ ನೀರಾವರಿ ಸೌಲಭ್ಯ ಒದಗಿಸಿದ್ದಾರೆ. ದೇವೇಗೌಡರ ವಿರುದ್ಧ ಅವಹೇಳನಕಾರಿ ಶಬ್ಧ ಬಳಸಿರುವುದು ಈ ದೇಶದ ಪ್ರಧಾನಿಗೆ ಅವಮಾನ ಮಾಡಿದಂತಾಗಿದೆ. ಕೂಡಲೇ ಕೆ.ಎಲ್.ರಾಜಣ್ಣ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ ಅತ್ತನೂರು, ಮುಖಂಡ ಯೂಸೂಫ್‌ಖಾನ್, ರವಿ ಪಾಟೀಲ, ಪವನಕುಮಾರ, ವಕೀಲ ಎನ್‌.ಶಿವಶಂಕರ, ಬಿ.ತಿಮ್ಮಾರೆಡ್ಡಿ, ರಾಮನಗೌಡ ಏಗನೂರು, ದಾನಪ್ಪ ಯಾದವ್, ಖಾಸಿಂ ನಾಯಕ, ಗಾಣದಾಳ ಲಕ್ಷ್ಮೀಪತಿ, ವಿಶ್ವನಾಥ ಪಟ್ಟಿ, ರಾಮಕೃಷ್ಣ, ಮಲ್ಲಿಕಾರ್ಜುನ ದೋತರಬಂಡಿ, ಮಹೇಶ ತುಪ್ಪದ, ಜಂಬುನಾಥ ಯಾದವ, ರವಿ ಮಡಿವಾಳ, ನರಸಿಂಹಲು, ಆಲಂಬಾಬು, ಅಂಜೀನೆಯ್ಯ ಯಾದವ, ವೆಂಕಟೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT