ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುದಗಲ್: ಕುಡಿಯುವ ನೀರಿಗಾಗಿ ಗ್ರಾ. ಪಂ ಮುಂದೆ ಎತ್ತು ಕಟ್ಟಿ ಪ್ರತಿಭಟನೆ

Published 19 ಮಾರ್ಚ್ 2024, 16:13 IST
Last Updated 19 ಮಾರ್ಚ್ 2024, 16:13 IST
ಅಕ್ಷರ ಗಾತ್ರ

ಮುದಗಲ್: ನಾಗಲಾಪುರ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ರುದ್ರಗೌಡ ಎನ್ನುವವರು ಪಂಚಾಯಿತಿ ಕಚೇರಿ ಮುಂದೆ ಎತ್ತು ಕಟ್ಟಿ ಪ್ರತಿಭಟನೆ ಮಾಡಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಿ ಕೊಡಿ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪಂಚಾಯಿತಿ ಚುನಾಯಿತ ಸದಸ್ಯರ ಮಾತಿಗೆ ಪಿಡಿಒ ಬೆಲೆ ಕೊಡುತ್ತಿಲ್ಲ. ಅನೇಕ ದಿನಗಳಿಂದ ಸರಿಯಾಗಿ ನೀರು ಪೂರೈಕೆಯಾಗಿಲ್ಲ ಎಂದು ಮಂಗಳವಾರ ಬೆಳಿಗ್ಗೆ ಜೋಡು ಎತ್ತುಗಳನ್ನು ಕಚೇರಿ ಮುಂದೆ ಕಟ್ಟಿ ಪ್ರತಿಭಟನೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT