ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ಣಪ್ರಮಾಣದ ತರಗತಿ ನಡೆಸುವಂತೆ ಪ್ರತಿಭಟನೆ

Last Updated 6 ಜನವರಿ 2022, 6:04 IST
ಅಕ್ಷರ ಗಾತ್ರ

ಮಸ್ಕಿ: ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಪೂರ್ಣಪ್ರಮಾಣದ ತರಗತಿ ನಡೆಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ ಅಖ್ತರ್ ಅಲಿ ಅವರಿಗೆ ಮನವಿ ಸಲ್ಲಿಸಲಾಯಿತು.

ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಮಹೇಶ ಮಸ್ಕಿ ಮಾತನಾಡಿ, ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರು ಇಲ್ಲದ ಕಾರಣ, ಕಳೆದ ಒಂದು ತಿಂಗಳಿನಿಂದ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಿನ್ನಡೆಯಾಗುತ್ತಿದೆ ಎಂದರು.

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ, ಕಾಲೇಜುಗಳಿಗೆ ಅಗತ್ಯ ಸೌಕರ್ಯಗಳು ಒದಗಿಸುವಂತೆ ಅವರು ಒತ್ತಾಯಿಸಿದರು.

ಎಬಿವಿಪಿ ತಾಲ್ಲೂಕು ಸಂಚಾಲಕ ರಘುನಾಥ ಠಾಕೂರು, ಸುನಿತ್ ದೀನಸಮುದ್ರ, ವೆಂಕಟೇಶ ಹುಲ್ಲೂರು, ವಿನಯ ಮಸ್ಕಿ, ವಿನಯ ಬಳಗಾನೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT