<p><strong>ಕವಿತಾಳ:</strong> ಸಂಗನಾಳ ಗ್ರಾಮದ ದಲಿತ ಯುವಕನ ಕೊಲೆ ಪ್ರಕರಣ ಮತ್ತು ಪಶ್ಚಿಮ ಬಂಗಾಳದ ವೈದ್ಯೆ ಮೇಲಿನ ಅತ್ಯಾಚಾರ ಘಟನೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ಮುಖಂಡರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಸಮಿತಿಯ ನಗರ ಘಟಕದ ಅಧ್ಯಕ್ಷ ಯಾಕೂಬ ಮಾತನಾಡಿ, ’ದಲಿತರ ಮೇಲೆ ಹಲ್ಲೆ ಮತ್ತಿತರ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ರಕ್ಷಣೆ ಇಲ್ಲದಂತಾಗಿದೆ. ಕುಟುಂಬಗಳಿಗೆ ಸೂಕ್ತ ರಕ್ಷಣೆ ಹಾಗೂ ನೆರವು ಒದಗಿಸಬೇಕುʼ ಎಂದು ಒತ್ತಾಯಿಸಿದರು.</p>.<p>ಸಂಘಟನೆ ಮುಖಂಡರಾದ ಹುಲಗಪ್ಪ ಸೈದಾಪುರ, ದುರುಗಪ್ಪ, ಮರಿಯಪ್ಪ ಕಟ್ಟಿಮನಿ, ಮಲ್ಲಪ್ಪ ಕಲಂಗೇರಿ, ಜೋಸೆಫ್ ಹುಲೇರ್, ಶಿವಪ್ಪ ಕಲಂಗೇರಿ, ಶಿವರಾಯಪ್ಪ, ನಾಗಪ್ಪ ತೆಲುಗರ, ವಿಜಯ ಕಡತಲ್, ಹುಸೇನಬಾಷಾ, ಜಂಬಣ್ಣ ಮತ್ತು ನಿಂಗಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಸಂಗನಾಳ ಗ್ರಾಮದ ದಲಿತ ಯುವಕನ ಕೊಲೆ ಪ್ರಕರಣ ಮತ್ತು ಪಶ್ಚಿಮ ಬಂಗಾಳದ ವೈದ್ಯೆ ಮೇಲಿನ ಅತ್ಯಾಚಾರ ಘಟನೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ಮುಖಂಡರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಸಮಿತಿಯ ನಗರ ಘಟಕದ ಅಧ್ಯಕ್ಷ ಯಾಕೂಬ ಮಾತನಾಡಿ, ’ದಲಿತರ ಮೇಲೆ ಹಲ್ಲೆ ಮತ್ತಿತರ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ರಕ್ಷಣೆ ಇಲ್ಲದಂತಾಗಿದೆ. ಕುಟುಂಬಗಳಿಗೆ ಸೂಕ್ತ ರಕ್ಷಣೆ ಹಾಗೂ ನೆರವು ಒದಗಿಸಬೇಕುʼ ಎಂದು ಒತ್ತಾಯಿಸಿದರು.</p>.<p>ಸಂಘಟನೆ ಮುಖಂಡರಾದ ಹುಲಗಪ್ಪ ಸೈದಾಪುರ, ದುರುಗಪ್ಪ, ಮರಿಯಪ್ಪ ಕಟ್ಟಿಮನಿ, ಮಲ್ಲಪ್ಪ ಕಲಂಗೇರಿ, ಜೋಸೆಫ್ ಹುಲೇರ್, ಶಿವಪ್ಪ ಕಲಂಗೇರಿ, ಶಿವರಾಯಪ್ಪ, ನಾಗಪ್ಪ ತೆಲುಗರ, ವಿಜಯ ಕಡತಲ್, ಹುಸೇನಬಾಷಾ, ಜಂಬಣ್ಣ ಮತ್ತು ನಿಂಗಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>