ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ತಡೆ: ಮುಖಂಡರ ಬಂಧನ

ರಾಹುಲ್‍ಗಾಂಧಿ, ಪ್ರಿಯಾಂಕಾ ಗಾಂಧಿ ಮೇಲೆ ಪೊಲೀಸ್ ದೌರ್ಜನ್ಯ ಖಂಡನೆ
Last Updated 3 ಅಕ್ಟೋಬರ್ 2020, 7:53 IST
ಅಕ್ಷರ ಗಾತ್ರ

ಸಿಂಧನೂರು: ಉತ್ತರಪ್ರದೇಶ ಹಾಥರಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‍ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಸಂಚಾರ ತಡೆದು ಪ್ರತಿಭಟಿಸಲು ಮುಂದಾದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆಯಿತು.

‘ಉತ್ತರ ಪ್ರದೇಶದಲ್ಲಿ ನಮ್ಮ ನಾಯಕರೇ ಸುರಕ್ಷಿತವಲ್ಲ ಎಂದ ಮೇಲೆ ಅಲ್ಲಿನ ದಲಿತರು, ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತವಾಗಿರಲು ಸಾಧ್ಯ. ಉತ್ತರಪ್ರದೇಶ ಗೂಂಡಾ ಮತ್ತು ಅತ್ಯಾಚಾರಿಗಳ ರಾಜ್ಯವಾಗಿದ್ದು, ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಆಗ್ರಹಿಸಿದರು.

ಶಹರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಒಂದು ತಾಸು ನಂತರ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಯಿತು.

ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖಂಡರಾದ ವೆಂಕಟೇಶ ರಾಗಲಪರ್ವಿ, ಖಾಜಾಹುಸೇನ್ ರೌಡಕುಂದಾ, ಅಮರೇಶ ಬಾಗೋಡಿ, ಹನುಮೇಶ ಬಾಗೋಡಿ, ಹುಸೇನಬಾಷಾ, ಪ್ರಭು ದೇವರಗುಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT