ಮದ್ಯ ಮಾರಾಟ ಮಳಿಗೆ ಸಮೀಪದಲ್ಲೇ ಮಠ, ಶಾಲೆ, ಬ್ಯಾಂಕ್ಗಳು ಇದ್ದು ಜನರಿಗೆ ತೊಂದರೆಯಾಗುತ್ತದೆ. ಕೂಡಲೇ ಮದ್ಯ ಮಾರಾಟ ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪಟ್ಟು ಹಿಡಿದು ಕುಳಿತರು. ಸ್ಥಳಕ್ಕೆ ಬಂದ ಅಬಕಾರಿ ಇಲಾಖೆಯ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿದರು. ಪ್ರತಿಭಟನಾಕಾರರು ಪಟ್ಟು ಸಡಿಲಿಸದ ಕಾರಣ ಎಂಎಸ್ಐಎಲ್ ಮದ್ಯದ ಅಂಗಡಿಯನ್ನು ಬಂದ್ ಮಾಡಿದ ನಂತರ ಸ್ಥಳೀಯರು ಪ್ರತಿಭಟನೆ ಹಿಂಪಡೆದರು.