ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲಾ ಕೇಂದ್ರವಾಗಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ನಗರಕ್ಕೆ ಬೇಕಾದ ಮೂಲಸೌಕರ್ಯಗಳಲ್ಲಿ ಪ್ರಮುಖವಾಗಿ ರಸ್ತೆಗಳು ಮತ್ತು ಬೀದಿ ದೀಪಗಳು ಇಲ್ಲ. ಕಸ ನಿರ್ವಹಣೆ ಸಮಸ್ಯೆ, ಧೂಳು ಮುಕ್ತ ನಗರ, 24 ಗಂಟೆ ನೀರು ಸರಬರಾಜು ಹಾಗೂ ಯುಜಿಡಿ ಯೋಜನೆ, ರಸ್ತೆ ಬದಿ ವಿದ್ಯುತ್ ಟಿ.ಸಿಗಳ ಅಳವಡಿಕೆ ನಿಷೇಧಿಸಿ, ಸೇರಿದಂತೆ ಇನ್ನೂ ಮುಂತಾದ ಜ್ವಲಂತ ಸಮಸ್ಯೆಗಳನ್ನು ಈಡೇರಿಸುವಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತ ವಿಫಲಗೊಂಡಿವೆ ಎಂದು ಆರೋಪಿಸಿದರು.