ಮಸ್ಕಿ: ರಾಜ್ಯದಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದನ್ನು ಖಂಡಿಸಿ ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘರ್ಷ ಸಮಿತಿ (ಮೂರ್ತಿ ಬಣ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕೋವಿಡ್ ಸನ್ನಿವೇಶವನ್ನು ಬಳಸಿಕೊಂಡು ಪರಿಶಿಷ್ಟ ಜಾತಿ ಮಹಿಳೆಯರ ಹಾಗೂ ಜನರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದೆ. ಕೂಡಲೇ ಸರ್ಕಾರ ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ ಮುಖಂಡ ಅನಿಲ್ ಕುಮಾರ್, ಯಲ್ಲಾರಲಿಂಗ ಹಾಗೂ ಸುರೇಶ ಸೇರಿ ಸಮಿತಿ ಕಾರ್ಯಕರ್ತರು ಇದ್ದರು.