ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಅಮೀನಾ ಬೇಗಂ ಎನ್ನುವವರ ಕಡೆಯವರು ಹಟ್ಟಿ ಪಟ್ಟಣದ ಯುವಕ ಅಹಮ್ಮದ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದರೆ ಮೂರು ತಿಂಗಳಿನಿಂದ ಸತಾಯಿಸುತ್ತಿದ್ದಾರೆ. ರಾಜಕೀಯ ಪ್ರಭಾವ ಬಳಸಿಕೊಂಡು ಪಿಎಸ್ಐ ಮೇಲೆ ಒತ್ತಡ ಹೇರಿ ದೂರು ನೀಡಲು ಹೋದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದು ಖಂಡನೀಯ’ ಎಂದರು.