ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲ ಮೇಲೆ ಹಲ್ಲೆ: ಪಿಎಸ್‌ಐ ಅಮಾನತು

Last Updated 26 ಏಪ್ರಿಲ್ 2019, 18:03 IST
ಅಕ್ಷರ ಗಾತ್ರ

ರಾಯಚೂರು: ವಕೀಲ ಪಿ.ಎಸ್.ವೀರಯ್ಯ ಮೇಲೆ ಹಲ್ಲೆ ಮಾಡಿದ್ದ ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್‍ಐ ನಾಗರಾಜ ಮೇಕಾ ಅವರನ್ನು ಅಮಾನತು ಮಾಡಲಾಗಿದೆ.

ವಕೀಲರ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಪಿಎಸ್‌ಐ ನಾಗರಾಜ ಮೆಕಾರನ್ನು ಗುರುವಾರ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ತಿಳಿಸಿದ್ದಾರೆ.

ನಗರದ ಸ್ಟೇಷನ್ ವೃತ್ತದಲ್ಲಿ ಈಚೆಗೆ ರಾತ್ರಿ 10 ಗಂಟೆ ವೇಳೆಯಲ್ಲಿ ಊಟದ ಪಾರ್ಸೆಲ್ ತೆಗೆದುಕೊಂಡು ಹೋಗಲು ನಿಂತಿದ್ದ ಅಂಗವಿಕಲ ವಕೀಲ ಪಿ.ಎಸ್.ವೀರಯ್ಯ ಮೇಲೆ ಪಿಎಸ್‌ಐ ಹಲ್ಲೆ ನಡೆಸಿದ್ದರು. ಠಾಣೆಗೆ ಕರೆದೊಯ್ದು ಹಿಂಸೆ ನೀಡಿದ್ದರು. ಪಿಎಸ್‌ಐ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಕೀಲರ ಸಂಘದಿಂದ ಗುರುವಾರ ಪ್ರತಿಭಟನೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT