ನಗರದ ಸ್ಟೇಷನ್ ವೃತ್ತದಲ್ಲಿ ಈಚೆಗೆ ರಾತ್ರಿ 10 ಗಂಟೆ ವೇಳೆಯಲ್ಲಿ ಊಟದ ಪಾರ್ಸೆಲ್ ತೆಗೆದುಕೊಂಡು ಹೋಗಲು ನಿಂತಿದ್ದ ಅಂಗವಿಕಲ ವಕೀಲ ಪಿ.ಎಸ್.ವೀರಯ್ಯ ಮೇಲೆ ಪಿಎಸ್ಐ ಹಲ್ಲೆ ನಡೆಸಿದ್ದರು. ಠಾಣೆಗೆ ಕರೆದೊಯ್ದು ಹಿಂಸೆ ನೀಡಿದ್ದರು. ಪಿಎಸ್ಐ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಕೀಲರ ಸಂಘದಿಂದ ಗುರುವಾರ ಪ್ರತಿಭಟನೆ ಮಾಡಲಾಗಿತ್ತು.