ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಕಾರಿ ಮಾರುವರ ಮೇಲೆ ಆಟಾಟೋಪ: ಪಿಎಸ್‌ಐ ಅಮಾನತು

ರಾಯಚೂರು ಎಸ್‌ಪಿ ಆದೇಶ
Last Updated 20 ಜೂನ್ 2021, 18:01 IST
ಅಕ್ಷರ ಗಾತ್ರ

ರಾಯಚೂರು: ನಗರದ ರಸ್ತೆ ಪಕ್ಕದಲ್ಲಿ ಭಾನುವಾರ ತರಕಾರಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ, ಕಾಲಿನಿಂದ ತರಕಾರಿಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅಸಭ್ಯವಾಗಿ ವರ್ತಿಸಿದ ಸದರ್ ಬಜಾರ್ ಠಾಣೆಯ ಪಿಎಸ್ಐ ಆಜಮ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ‌ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ.

ವಾರಾಂತ್ಯ ಲಾಕ್ ಡೌನ್ ಜಾರಿ ಇದ್ದರೂ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಕೆಲವು ಗ್ರಾಮೀಣ ಭಾಗದ ತರಕಾರಿ ವ್ಯಾಪಾರಿಗಳು ಕುಳಿತುಕೊಂಡಿದ್ದರು.

ಪೊಲೀಸ್ ವಾಹನದಲ್ಲಿ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಅವರು ಕೊತ್ತಂಬರಿ ಸೊಪ್ಪು, ನಿಂಬೆಹಣ್ಣು ಹಾಗೂ ಟೊಮೆಟೊ ಹಾಗೂ ಇತರೆ ಸೊಪ್ಪಿನ ತರಕಾರಿಗಳನ್ನು ಕಾಲಿನಿಂದ ಒದೆಯುತ್ತಿರುವ ವಿಡಿಯೋ ತುಣುಕುಗಳು ವೈರಲ್ ಆಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT