<p><strong>ಮಾನ್ವಿ:</strong> ಪಟ್ಟಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಸತಿ ಹಾಗೂ ತರಗತಿಗಳ ನಿರ್ವಹಣೆಗೆ ಕೊಠಡಿಗಳ ಕೊರತೆ ಉಂಟಾಗಿದೆ.</p>.<p>ರಾಜ್ಯ ಸರ್ಕಾರ 2023-24ನೇ ಶೈಕ್ಷಣಿಕ ವರ್ಷದಿಂದ ಈ ವಸತಿ ಶಾಲೆಯನ್ನು ಮೇಲ್ದರ್ಜೆಗೇರಿಸಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿತ್ತು. ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ತಲಾ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿತ್ತು.</p>.<p>ಕಾಲೇಜು ಆರಂಭದ ಮೊದಲ ವರ್ಷ ವಿಜ್ಞಾನ ವಿಭಾಗಕ್ಕೆ ಕೇವಲ 7 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದರು. ಪ್ರಸಕ್ತ ವರ್ಷ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ 18 ಹಾಗೂ ದ್ವಿತೀಯ ಪಿಯುಸಿ 20 ವಿದ್ಯಾರ್ಥಿಗಳು ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜು ಆರಂಭವಾಗಿ ಮೂರು ವರ್ಷಗಳಾದರೂ ವಾಣಿಜ್ಯ ವಿಭಾಗವನ್ನು ಇನ್ನೂ ಆರಂಭಿಸಿಲ್ಲ.</p>.<p>ವಿಜ್ಞಾನ ವಿಭಾಗದ ಬೋಧನೆಗೆ 6 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತರಗತಿಯ ಕೊಠಡಿಗಳು ಹಾಗೂ ವಸತಿ ಸೌಲಭ್ಯ ಇಲ್ಲ. ಈಗಿರುವ ವಸತಿ ಶಾಲೆಯ ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್ಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಬಾಲಕರ ಹಾಸ್ಟೆಲ್ನಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇರುವ ಕಾರಣ ಈ ಬಾರಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಬಾಲಕರಿಗೆ ಪಿಯುಸಿ ತರಗತಿಗೆ ಪ್ರವೇಶಾವಕಾಶ ನೀಡಿಲ್ಲ. ಬಾಲಕಿಯರಿಗೆ ಮಾತ್ರ ಪ್ರಥಮ ಪಿಯುಸಿ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, 18 ವಿದ್ಯಾರ್ಥಿನಿಯರು ಇದ್ದಾರೆ. ಕೊಠಡಿಗಳ ಕೊರತೆ ಇರುವ ಕಾರಣ ವಸತಿ ಶಾಲೆಯ ಕಂಪ್ಯೂಟರ್ ಪ್ರಯೋಗಾಲಯಗಳಲ್ಲಿ ಕಾಲೇಜಿನ ತರಗತಿಗಳನ್ನು ನಡೆಸಲಾಗುತ್ತಿದೆ.</p>.<p>ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸುಸಜ್ಜಿತ ಪ್ರಯೋಗಾಲಯ, ತರಗತಿ ಕೊಠಡಿ ಮತ್ತಿತರ ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಪಾಲಕರೂ ಸಹ ಈ ಕಾಲೇಜಿನಲ್ಲಿ ತಮ್ಮ ಮಕ್ಕಳ ಪ್ರವೇಶಕ್ಕೆ ಹಿಂದೇಟು ಹಾಕುವಂತಾಗಿದೆ. ಪಿಯುಸಿ ವಿಜ್ಞಾನ ಕಲಿಯಲು ಗಾಮೀಣ ಪ್ರದೇಶಗಳ ಮಕ್ಕಳಿಗೆ ವರದಾನವಾಗಬೇಕಿದ್ದ ಈ ಕಾಲೇಜು ಇದ್ದೂ ಇಲ್ಲದಂತಾಗಿದೆ.</p>.<p>ಸದರಿ ವಸತಿ ಶಾಲೆಯ ಆವರಣದಲ್ಲಿ ಪದವಿ ಪೂರ್ವ ಕಾಲೇಜು ವಿಭಾಗಕ್ಕೆ ಪ್ರತ್ಯೇಕ ಕಟ್ಟಡ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದು ಪಾಲಕರು ಮನವಿ ಮಾಡಿದ್ದಾರೆ.</p>.<blockquote>ಕಂಪ್ಯೂಟರ್ ಪ್ರಯೋಗಾಲಯದಲ್ಲಿ ತರಗತಿಗಳ ನಿರ್ವಹಣೆ | ಮಕ್ಕಳ ಪ್ರವೇಶಕ್ಕೆ ಪಾಲಕರ ಹಿಂದೇಟು |ಆರಂಭವಾಗದ ವಾಣಿಜ್ಯ ವಿಭಾಗ</blockquote>.<div><blockquote>ಪಿಯು ಕಾಲೇಜು ತರಗತಿಗಳ ನಿರ್ವಹಣೆಗೆ ಕೊಠಡಿ ಸಮಸ್ಯೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ</blockquote><span class="attribution">ವೆಂಕಟೇಶ ನಾಯಕ ಪ್ರಾಂಶುಪಾಲ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಾನ್ವಿ</span></div>.<div><blockquote>ಅಧಿಕಾರಿಗಳು ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿ ಕೊಠಡಿ ಸುಸಜ್ಜಿತ ಪ್ರಯೋಗಾಲಯ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು</blockquote><span class="attribution">ಶೇಖ್ ಬಾಬಾ ಹುಸೇನ್ ತಾಲ್ಲೂಕು ಅಧ್ಯಕ್ಷ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ಪಟ್ಟಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಸತಿ ಹಾಗೂ ತರಗತಿಗಳ ನಿರ್ವಹಣೆಗೆ ಕೊಠಡಿಗಳ ಕೊರತೆ ಉಂಟಾಗಿದೆ.</p>.<p>ರಾಜ್ಯ ಸರ್ಕಾರ 2023-24ನೇ ಶೈಕ್ಷಣಿಕ ವರ್ಷದಿಂದ ಈ ವಸತಿ ಶಾಲೆಯನ್ನು ಮೇಲ್ದರ್ಜೆಗೇರಿಸಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿತ್ತು. ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ತಲಾ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿತ್ತು.</p>.<p>ಕಾಲೇಜು ಆರಂಭದ ಮೊದಲ ವರ್ಷ ವಿಜ್ಞಾನ ವಿಭಾಗಕ್ಕೆ ಕೇವಲ 7 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದರು. ಪ್ರಸಕ್ತ ವರ್ಷ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ 18 ಹಾಗೂ ದ್ವಿತೀಯ ಪಿಯುಸಿ 20 ವಿದ್ಯಾರ್ಥಿಗಳು ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜು ಆರಂಭವಾಗಿ ಮೂರು ವರ್ಷಗಳಾದರೂ ವಾಣಿಜ್ಯ ವಿಭಾಗವನ್ನು ಇನ್ನೂ ಆರಂಭಿಸಿಲ್ಲ.</p>.<p>ವಿಜ್ಞಾನ ವಿಭಾಗದ ಬೋಧನೆಗೆ 6 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತರಗತಿಯ ಕೊಠಡಿಗಳು ಹಾಗೂ ವಸತಿ ಸೌಲಭ್ಯ ಇಲ್ಲ. ಈಗಿರುವ ವಸತಿ ಶಾಲೆಯ ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್ಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಬಾಲಕರ ಹಾಸ್ಟೆಲ್ನಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇರುವ ಕಾರಣ ಈ ಬಾರಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಬಾಲಕರಿಗೆ ಪಿಯುಸಿ ತರಗತಿಗೆ ಪ್ರವೇಶಾವಕಾಶ ನೀಡಿಲ್ಲ. ಬಾಲಕಿಯರಿಗೆ ಮಾತ್ರ ಪ್ರಥಮ ಪಿಯುಸಿ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, 18 ವಿದ್ಯಾರ್ಥಿನಿಯರು ಇದ್ದಾರೆ. ಕೊಠಡಿಗಳ ಕೊರತೆ ಇರುವ ಕಾರಣ ವಸತಿ ಶಾಲೆಯ ಕಂಪ್ಯೂಟರ್ ಪ್ರಯೋಗಾಲಯಗಳಲ್ಲಿ ಕಾಲೇಜಿನ ತರಗತಿಗಳನ್ನು ನಡೆಸಲಾಗುತ್ತಿದೆ.</p>.<p>ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸುಸಜ್ಜಿತ ಪ್ರಯೋಗಾಲಯ, ತರಗತಿ ಕೊಠಡಿ ಮತ್ತಿತರ ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಪಾಲಕರೂ ಸಹ ಈ ಕಾಲೇಜಿನಲ್ಲಿ ತಮ್ಮ ಮಕ್ಕಳ ಪ್ರವೇಶಕ್ಕೆ ಹಿಂದೇಟು ಹಾಕುವಂತಾಗಿದೆ. ಪಿಯುಸಿ ವಿಜ್ಞಾನ ಕಲಿಯಲು ಗಾಮೀಣ ಪ್ರದೇಶಗಳ ಮಕ್ಕಳಿಗೆ ವರದಾನವಾಗಬೇಕಿದ್ದ ಈ ಕಾಲೇಜು ಇದ್ದೂ ಇಲ್ಲದಂತಾಗಿದೆ.</p>.<p>ಸದರಿ ವಸತಿ ಶಾಲೆಯ ಆವರಣದಲ್ಲಿ ಪದವಿ ಪೂರ್ವ ಕಾಲೇಜು ವಿಭಾಗಕ್ಕೆ ಪ್ರತ್ಯೇಕ ಕಟ್ಟಡ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದು ಪಾಲಕರು ಮನವಿ ಮಾಡಿದ್ದಾರೆ.</p>.<blockquote>ಕಂಪ್ಯೂಟರ್ ಪ್ರಯೋಗಾಲಯದಲ್ಲಿ ತರಗತಿಗಳ ನಿರ್ವಹಣೆ | ಮಕ್ಕಳ ಪ್ರವೇಶಕ್ಕೆ ಪಾಲಕರ ಹಿಂದೇಟು |ಆರಂಭವಾಗದ ವಾಣಿಜ್ಯ ವಿಭಾಗ</blockquote>.<div><blockquote>ಪಿಯು ಕಾಲೇಜು ತರಗತಿಗಳ ನಿರ್ವಹಣೆಗೆ ಕೊಠಡಿ ಸಮಸ್ಯೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ</blockquote><span class="attribution">ವೆಂಕಟೇಶ ನಾಯಕ ಪ್ರಾಂಶುಪಾಲ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಾನ್ವಿ</span></div>.<div><blockquote>ಅಧಿಕಾರಿಗಳು ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿ ಕೊಠಡಿ ಸುಸಜ್ಜಿತ ಪ್ರಯೋಗಾಲಯ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು</blockquote><span class="attribution">ಶೇಖ್ ಬಾಬಾ ಹುಸೇನ್ ತಾಲ್ಲೂಕು ಅಧ್ಯಕ್ಷ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>