ತಾಲ್ಲೂಕಿನ ಕೆಲ ಪದವಿ ಪೂರ್ವ ಕಾಲೇಜುಗಳ ಪ್ರಭಾರ ಪ್ರಾಂಶುಪಾಲರು ಹಾಗೂ ಉಪ ನಿರ್ದೇಶಕರು ಸ್ವ ಇಚ್ಚೆಯಿಂದ ಅರ್ಜಿ ಆಹ್ವಾನಿಸಿ ತಮಗೆ ಬೇಕಾದವರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಅವಕಾಶ ವಂಚಿತ ಅತಿಥಿ ಉಪನ್ಯಾಸಕರು ಜಂಟಿ ನಿರ್ದೇಶಕ ಮಂಜುನಾಥ ಪ್ರಸನ್ನ ಅವರಿಗೆ ಮಾಹಿತಿ ನೀಡಿದ್ದಾರೆ.ಜಂಟಿ ನಿರ್ದೇಶಕ ಮಂಜುನಾಥ ಪ್ರಸನ್ನ ಮಾತನಾಡಿ,‘ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರದಿಂದ ಅನುದಾನ ಹಾಗೂ ಅನುಮತಿ ದೊರತಿದೆ. ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳದಕಾರಣ ಅತಿಥಿ ಉಪನ್ಯಾಸಕರ ನೇಮಕಕ್ಕೆ ಇಲಾಖೆ ಆದೇಶ ಹೊರಡಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.