<p><strong>ರಾಯಚೂರು:</strong>ದೇಶದಲ್ಲಿದ್ದ ಧಾರ್ಮಿಕ, ಶೈಕ್ಷಣಿಕ ಕಟ್ಟುಪಾಡುಗಳನ್ನು ಜಯಿಸಿದ ತಾಯಿ ಸಾವಿತ್ರಿಬಾಯಿ ಪುಲೆ ಅವರು ಮಹಿಳೆಯರಿಗೆ ಶಿಕ್ಷಣ ನೀಡಿದ್ದನ್ನು ಸದಾ ಸ್ಮರಿಸಬೇಕಿದೆ ಎಂದುಅಕ್ಷಯ ರೂರಲ್ ಡವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ನರೇಂದ್ರಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಬಾವಿದೊಡ್ಡಿ ಗ್ರಾಮದ ಸರ್ಕಾರಿ ಪ್ರೌಢಶಶಾಲೆಯಲ್ಲಿ ಅಕ್ಷಯ ರೂರಲ್ ಡವಲಪ್ಮೆಂಟ್ ಸೊಸೈಟಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಸಾವಿತ್ರಿಬಾಯಿ ಪುಲೆ’ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಹಳೆಯೊಬ್ಬರು ಶಿಕ್ಷಕಿ ಆಗುವುದು ಸುಲಭದ ಮಾತಾಗಿರಲಿಲ್ಲ. ಅದರಲ್ಲೂ ಪುರುಷ ಪ್ರಧಾನ ಸಮಾಜದಲ್ಲಿ ಕಟು ಸಂಪ್ರದಾಯವಾದಿಗಳ ವಿರೋಧ ಕಟ್ಟಿಕೊಂಡು ಶಿಕ್ಷಣದ ಮೆಟ್ಟಿಲನ್ನು ಹತ್ತಿದ್ದು ದೊಡ್ಡ ಸಾಹಸವೇ ಸರಿ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿ, ಮಹಿಳೆಯರು ಮತ್ತು ಶಿಕ್ಷಣದ ಬಗೆಗೆ ಸಾವಿತ್ರಿಬಾಯಿ ಪುಲೆ ಅವರು ತೋರಿದ ಕಾಳಜಿ ಹಾಗೂ ಅವರು ಮಾಡಿದ ಕಾರ್ಯ ಇಂದಿಗೂ ಪ್ರೆರಣಾದಾಯಿ ಎಂದು ತಿಳಿಸಿದರು.</p>.<p>ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ರವಿಕಿರಣ ನಿರೂಪಿಸಿದರು. ಸಂಸ್ಥೆಯ ನಿರ್ದೇಶಕ ಏಡು ಕೊಂಡಲ ರಾಜು, ತಿಮ್ಮನಗೌಡ್ರು, ಸುನಿಲಕುಮಾರ್, ಮಂಜುನಾಥ, ಕೃಷ್ಣಕುಮಾರ, ಮಂಜೇಶ, ಹರಿಪ್ರಸಾದ, ಮರ್ಲಿಂಗ ಪಾಟೀಲ ಹಾಗೂ ಶಾಲೆಯ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ದೇಶದಲ್ಲಿದ್ದ ಧಾರ್ಮಿಕ, ಶೈಕ್ಷಣಿಕ ಕಟ್ಟುಪಾಡುಗಳನ್ನು ಜಯಿಸಿದ ತಾಯಿ ಸಾವಿತ್ರಿಬಾಯಿ ಪುಲೆ ಅವರು ಮಹಿಳೆಯರಿಗೆ ಶಿಕ್ಷಣ ನೀಡಿದ್ದನ್ನು ಸದಾ ಸ್ಮರಿಸಬೇಕಿದೆ ಎಂದುಅಕ್ಷಯ ರೂರಲ್ ಡವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ನರೇಂದ್ರಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಬಾವಿದೊಡ್ಡಿ ಗ್ರಾಮದ ಸರ್ಕಾರಿ ಪ್ರೌಢಶಶಾಲೆಯಲ್ಲಿ ಅಕ್ಷಯ ರೂರಲ್ ಡವಲಪ್ಮೆಂಟ್ ಸೊಸೈಟಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಸಾವಿತ್ರಿಬಾಯಿ ಪುಲೆ’ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಹಳೆಯೊಬ್ಬರು ಶಿಕ್ಷಕಿ ಆಗುವುದು ಸುಲಭದ ಮಾತಾಗಿರಲಿಲ್ಲ. ಅದರಲ್ಲೂ ಪುರುಷ ಪ್ರಧಾನ ಸಮಾಜದಲ್ಲಿ ಕಟು ಸಂಪ್ರದಾಯವಾದಿಗಳ ವಿರೋಧ ಕಟ್ಟಿಕೊಂಡು ಶಿಕ್ಷಣದ ಮೆಟ್ಟಿಲನ್ನು ಹತ್ತಿದ್ದು ದೊಡ್ಡ ಸಾಹಸವೇ ಸರಿ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿ, ಮಹಿಳೆಯರು ಮತ್ತು ಶಿಕ್ಷಣದ ಬಗೆಗೆ ಸಾವಿತ್ರಿಬಾಯಿ ಪುಲೆ ಅವರು ತೋರಿದ ಕಾಳಜಿ ಹಾಗೂ ಅವರು ಮಾಡಿದ ಕಾರ್ಯ ಇಂದಿಗೂ ಪ್ರೆರಣಾದಾಯಿ ಎಂದು ತಿಳಿಸಿದರು.</p>.<p>ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ರವಿಕಿರಣ ನಿರೂಪಿಸಿದರು. ಸಂಸ್ಥೆಯ ನಿರ್ದೇಶಕ ಏಡು ಕೊಂಡಲ ರಾಜು, ತಿಮ್ಮನಗೌಡ್ರು, ಸುನಿಲಕುಮಾರ್, ಮಂಜುನಾಥ, ಕೃಷ್ಣಕುಮಾರ, ಮಂಜೇಶ, ಹರಿಪ್ರಸಾದ, ಮರ್ಲಿಂಗ ಪಾಟೀಲ ಹಾಗೂ ಶಾಲೆಯ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>