ಘಟನೆ ಬಗ್ಗೆ ಆಕ್ರೋಶ ಹೊಂದಿದ್ದ ಸ್ಥಳೀಯರ ಗುಂಪು ಕಬ್ಬಿಣದ ರಾಡ್ಗಳು, ಸಲಾಕೆಗಳು ಮತ್ತು ಸುತ್ತಿಗೆಗಳನ್ನು ಹಿಡಿದುಕೊಂಡು ಆರೋಪಿಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ ಹಾಕಿತ್ತು. ಆದರೆ, ಉದ್ರಿಕ್ತರ ಮನವಿಗೆ ಪೊಲೀಸರು ಒಪ್ಪಿರಲಿಲ್ಲ. ಇದರಿಂದ ಕುಪಿತಗೊಂಡ ಉದ್ರಿಕ್ತರು ಠಾಣೆಗೆ ನುಗ್ಗಿದ್ದಲ್ಲದೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಅತ್ಯಾಚಾರ ಆರೋಪಿಗಳನ್ನು ಹೊರಗೆಳೆದು ರಸ್ತೆಯಲ್ಲಿ ಎಳೆದೊಯ್ದು ಹತ್ಯೆ ಮಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.