ಎರಡು ದಿನಗಳ ಹಿಂದೆ ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ನಡೆಸಿರುವ ವಿಚಾರಕ್ಕೆ ಪರಸ್ಪರ ಹೊಡೆದಾಡಿದ್ದಾರೆ. ಎರಡು ಗುಂಪುಗಳು ಕಬ್ಬಿಣದ ರಾಡ್, ಬೆತ್ತ ಹಾಗೂ ಇತರೆ ವಸ್ತುಗಳಿಂದ ಹೊಡೆದಾಡಿದ್ದು ಘಟನೆಯಲ್ಲಿ ರೇಷ್ಮಾ, ನರಸಪ್ಪ, ಮನೋಹರ, ಗಿರಿಜಾ ಎಂಬುವವರಿಗೆ ಗಾಯಗಳಾಗಿವೆ. ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.