<p><strong>ರಾಯಚೂರು:</strong> ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರ ಪುತ್ರ ಹಾಗೂ ಸಹೋದರ ವಿರುದ್ಧ ಯುಗಾದಿ ದಿನ ಬೇಟೆಯಾಡಿದ ಮೊಲಗಳನ್ನು ಕೊಡಲಿ ಹಾಗೂ ಭರ್ಜಿಗೆ ಸಿಕ್ಕಿಸಿಕೊಂಡು ಮೆರವಣಿಗೆ ಮಾಡಿದ ಆರೋಪದಡಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.</p><p>ಶಾಸಕರ ಪುತ್ರ ಆರ್.ಸತೀಶಗೌಡ ತುರ್ವಿಹಾಳ, ಸಹೋದರ ಸಿದ್ದನಗೌಡ ತುರ್ವಿಹಾಳ ಹಾಗೂ ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಯಚೂರು ಡಿಸಿಎಫ್ ಪ್ರವೀಣ ತಿಳಿಸಿದ್ದಾರೆ.</p><p>ಸಾವಿರಾರು ಜನರ ಎದುರೇ ಕೊಡಲಿಗೆ ಮೊಲಗಳನ್ನು ಸಿಕ್ಕಿಸಿಕೊಂಡು ವಿಜೃಂಭಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಲವರು ಕೊಡಲಿಗಳಿಗೆ ಮೊಲಗಳನ್ನು ತೂಗು ಹಾಕಿ ಹಿಂಸೆ ನೀಡಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.</p><p>‘ಯುಗಾದಿ ಹಬ್ಬದಲ್ಲಿ ಕೆಲವು ಸಂಪ್ರದಾಯಗಳನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಕುಟುಂಬದ ಸದಸ್ಯರು ಮೊಲಗಳನ್ನು ಬೇಟೆಯಾಡಿಲ್ಲ. ಆದರೆ, ಮೆರವಣಿಗೆಯಲ್ಲಿ ಬಂದ ಯುವಕರು ನಮ್ಮವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿದ್ದಾರೆ ಅಷ್ಟೇ’ ಎಂದು ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರ್ವಿಹಾಳ ಪ್ರತಿಕ್ರಿಯಿಸಿದ್ದಾರೆ.</p><p>‘ಮೊಲಗಳನ್ನು ಬೇಟೆಯಾಡುವುದು ತಪ್ಪು. ಇಂಥ ಕೃತ್ಯಗಳನ್ನು ನಡೆಸದಂತೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗುವುದು’ ಎಂದು ಹೇಳಿದ್ದಾರೆ. </p><p>‘ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದವರು ಯಾರೇ ಇದ್ದರೂ ಅವರನ್ನು ರಕ್ಷಣೆ ಮಾಡುವುದಿಲ್ಲ. ಬೇಟೆಯಾಡಿದ್ದರೆ ಶಾಸಕರ ಪುತ್ರ ಹಾಗೂ ಸಹೋದರನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅರಣ್ಯ ಇಲಾಖೆ ಸಚಿವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರ ಪುತ್ರ ಹಾಗೂ ಸಹೋದರ ವಿರುದ್ಧ ಯುಗಾದಿ ದಿನ ಬೇಟೆಯಾಡಿದ ಮೊಲಗಳನ್ನು ಕೊಡಲಿ ಹಾಗೂ ಭರ್ಜಿಗೆ ಸಿಕ್ಕಿಸಿಕೊಂಡು ಮೆರವಣಿಗೆ ಮಾಡಿದ ಆರೋಪದಡಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.</p><p>ಶಾಸಕರ ಪುತ್ರ ಆರ್.ಸತೀಶಗೌಡ ತುರ್ವಿಹಾಳ, ಸಹೋದರ ಸಿದ್ದನಗೌಡ ತುರ್ವಿಹಾಳ ಹಾಗೂ ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಯಚೂರು ಡಿಸಿಎಫ್ ಪ್ರವೀಣ ತಿಳಿಸಿದ್ದಾರೆ.</p><p>ಸಾವಿರಾರು ಜನರ ಎದುರೇ ಕೊಡಲಿಗೆ ಮೊಲಗಳನ್ನು ಸಿಕ್ಕಿಸಿಕೊಂಡು ವಿಜೃಂಭಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಲವರು ಕೊಡಲಿಗಳಿಗೆ ಮೊಲಗಳನ್ನು ತೂಗು ಹಾಕಿ ಹಿಂಸೆ ನೀಡಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.</p><p>‘ಯುಗಾದಿ ಹಬ್ಬದಲ್ಲಿ ಕೆಲವು ಸಂಪ್ರದಾಯಗಳನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಕುಟುಂಬದ ಸದಸ್ಯರು ಮೊಲಗಳನ್ನು ಬೇಟೆಯಾಡಿಲ್ಲ. ಆದರೆ, ಮೆರವಣಿಗೆಯಲ್ಲಿ ಬಂದ ಯುವಕರು ನಮ್ಮವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿದ್ದಾರೆ ಅಷ್ಟೇ’ ಎಂದು ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರ್ವಿಹಾಳ ಪ್ರತಿಕ್ರಿಯಿಸಿದ್ದಾರೆ.</p><p>‘ಮೊಲಗಳನ್ನು ಬೇಟೆಯಾಡುವುದು ತಪ್ಪು. ಇಂಥ ಕೃತ್ಯಗಳನ್ನು ನಡೆಸದಂತೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗುವುದು’ ಎಂದು ಹೇಳಿದ್ದಾರೆ. </p><p>‘ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದವರು ಯಾರೇ ಇದ್ದರೂ ಅವರನ್ನು ರಕ್ಷಣೆ ಮಾಡುವುದಿಲ್ಲ. ಬೇಟೆಯಾಡಿದ್ದರೆ ಶಾಸಕರ ಪುತ್ರ ಹಾಗೂ ಸಹೋದರನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅರಣ್ಯ ಇಲಾಖೆ ಸಚಿವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>