<p><strong>ರಾಯಚೂರು</strong>: ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದ ಯೋಗೀಂದ್ರ ಸಭಾಮಂಟಪದಲ್ಲಿ ನಡೆದ ಸಮಾರಂಭದಲ್ಲಿ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಇಬ್ಬರು ಸಾಧಕರಿಗೆ ‘ರಾಘವೇಂದ್ರ ಅನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟಿ ಪಂಡಿತ ರಾಜಾರಾಮ ಶುಕ್ಲ ಅವರಿಗೆ ₹1.50 ಲಕ್ಷ ನಗದು ಹಾಗೂ ರಾಘವೇಂದ್ರ ಅನುಗ್ರಹ ಪ್ರಶಸ್ತಿ, ಕೊಯಮತ್ತೂರಿನ ಲೆಕ್ಕ ಪರಿಶೋಧಕ ಪಿ.ಆರ್.ವಿಠ್ಠಲ್ ಅವರಿಗೆ ₹1 ಲಕ್ಷ ನಗದು ಹಾಗೂ ರಾಘವೇಂದ್ರ ಅನುಗ್ರಹ ಪ್ರಶಸ್ತಿ, ಶಾಲು ಫಲಮಂತ್ರಾಕ್ಷತೆ ನೀಡಿದರು.</p>.<p>ನಂತರ ಮಾತನಾಡಿದ ಶ್ರೀಗಳು,‘ರಾಘವೇಂದ್ರ ಸ್ವಾಮಿಗಳು ತಮ್ಮ ಯೋಗಶಕ್ತಿಯಿಂದ ಭಕ್ತರನ್ನು ಅನುಗ್ರಹಿಸುತ್ತಿದ್ದಾರೆ. ನಾಸ್ತಿಕ ಜಗತ್ತಿನಲ್ಲಿಯೂ ಆಸ್ತಿಕತೆಯನ್ನು ತುಂಬುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>ಹಿರಿಯ ಪಂಡಿತ ರಾಜಾ ಗಿರಿಯಾಚಾರ್, ನಿವೃತ್ತ ನ್ಯಾಯಾಧೀಶ ಶ್ರೀಧರ, ಸಹಾಯಕ ಆಡಳಿತ ಅಧಿಕಾರಿ ಮಾಧವಶೆಟ್ಟಿ, ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ವಾದಿರಾಜಾಚಾರ್ ಹಾಗೂ ಗೌತಮಾಚಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದ ಯೋಗೀಂದ್ರ ಸಭಾಮಂಟಪದಲ್ಲಿ ನಡೆದ ಸಮಾರಂಭದಲ್ಲಿ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಇಬ್ಬರು ಸಾಧಕರಿಗೆ ‘ರಾಘವೇಂದ್ರ ಅನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟಿ ಪಂಡಿತ ರಾಜಾರಾಮ ಶುಕ್ಲ ಅವರಿಗೆ ₹1.50 ಲಕ್ಷ ನಗದು ಹಾಗೂ ರಾಘವೇಂದ್ರ ಅನುಗ್ರಹ ಪ್ರಶಸ್ತಿ, ಕೊಯಮತ್ತೂರಿನ ಲೆಕ್ಕ ಪರಿಶೋಧಕ ಪಿ.ಆರ್.ವಿಠ್ಠಲ್ ಅವರಿಗೆ ₹1 ಲಕ್ಷ ನಗದು ಹಾಗೂ ರಾಘವೇಂದ್ರ ಅನುಗ್ರಹ ಪ್ರಶಸ್ತಿ, ಶಾಲು ಫಲಮಂತ್ರಾಕ್ಷತೆ ನೀಡಿದರು.</p>.<p>ನಂತರ ಮಾತನಾಡಿದ ಶ್ರೀಗಳು,‘ರಾಘವೇಂದ್ರ ಸ್ವಾಮಿಗಳು ತಮ್ಮ ಯೋಗಶಕ್ತಿಯಿಂದ ಭಕ್ತರನ್ನು ಅನುಗ್ರಹಿಸುತ್ತಿದ್ದಾರೆ. ನಾಸ್ತಿಕ ಜಗತ್ತಿನಲ್ಲಿಯೂ ಆಸ್ತಿಕತೆಯನ್ನು ತುಂಬುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>ಹಿರಿಯ ಪಂಡಿತ ರಾಜಾ ಗಿರಿಯಾಚಾರ್, ನಿವೃತ್ತ ನ್ಯಾಯಾಧೀಶ ಶ್ರೀಧರ, ಸಹಾಯಕ ಆಡಳಿತ ಅಧಿಕಾರಿ ಮಾಧವಶೆಟ್ಟಿ, ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ವಾದಿರಾಜಾಚಾರ್ ಹಾಗೂ ಗೌತಮಾಚಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>