<p><strong>ರಾಯಚೂರು:</strong> ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ ನಿಮಿತ್ತ ಮಂತ್ರಾಲಯದಲ್ಲಿ ಭಾನುವಾರ ಸುಬುಧೇಂದ್ರ ತೀರ್ಥ ಶ್ರೀಗಳ ನೇತೃತ್ವದಲ್ಲಿ ಪೂರ್ವಾರಾಧನೆ ವಿಜೃಂಭಣೆಯಿಂದ ಜರುಗಿತು.</p><p>ಪೂರ್ವಾರಾಧನೆ ಪ್ರಯುಕ್ತ ಶ್ರೀರಂಗಂ ದೇವಸ್ಥಾನದ ಅಧಿಕಾರಿಗಳು, ಪುರೋಹಿತರು ಪವಿತ್ರ ಶೇಷವಸ್ತ್ರ ತಂದರು. ಕಲಾ–ತಂಡಗಳ ವಾದ್ಯಗಳೊಂದಿಗೆ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.</p><p>ಸುಬುಧೇಂದ್ರ ತೀರ್ಥ ಸ್ವಾಮೀಜಿ ಶೇಷವಸ್ತ್ರವನ್ನು ರಾಯರಿಗೆ ಅರ್ಪಿಸಿದ್ದು, ಶ್ರೀರಂಗಂ ಅಧಿಕಾರಿಗಳಿಗೆ ಸನ್ಮಾನಿಸಿದರು. ನಂತರ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.</p><p>ಬೆಳಗಿನ ಜಾವ ಪಂಚಾಮೃತ ಅಭಿಷೇಕ, ಉತ್ಸವ ರಾಯರ ಪಾದಪೂಜೆ, ರಜತ ಸಿಂಹವಾಹನೋತ್ಸವ ಇನ್ನಿತರ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ನಡೆದವು. ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇರಿಸಿ ಮಠದ ಪ್ರಾಂಗಣದಲ್ಲಿ ಸಕಲ ಭಕ್ತರೊಂದಿಗೆ ಮೆರವಣಿಗೆ ಮಾಡಲಾಯಿತು.</p><p>ಸುಬುಧೇಂದ್ರ ತೀರ್ಥರು ಇದೇ ಸಂದರ್ಭದಲ್ಲಿ ರಾಯರ ಚಿನ್ನದ ಪಾದುಕೆಗಳಿಗೆ ಪೂಜೆ ಸಲ್ಲಿಸಿದರು.</p><p>ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಮಹಾರಾಷ್ಟ್ರದಿಂದ ಆಗಮಿಸಿರುವ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ ನಿಮಿತ್ತ ಮಂತ್ರಾಲಯದಲ್ಲಿ ಭಾನುವಾರ ಸುಬುಧೇಂದ್ರ ತೀರ್ಥ ಶ್ರೀಗಳ ನೇತೃತ್ವದಲ್ಲಿ ಪೂರ್ವಾರಾಧನೆ ವಿಜೃಂಭಣೆಯಿಂದ ಜರುಗಿತು.</p><p>ಪೂರ್ವಾರಾಧನೆ ಪ್ರಯುಕ್ತ ಶ್ರೀರಂಗಂ ದೇವಸ್ಥಾನದ ಅಧಿಕಾರಿಗಳು, ಪುರೋಹಿತರು ಪವಿತ್ರ ಶೇಷವಸ್ತ್ರ ತಂದರು. ಕಲಾ–ತಂಡಗಳ ವಾದ್ಯಗಳೊಂದಿಗೆ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.</p><p>ಸುಬುಧೇಂದ್ರ ತೀರ್ಥ ಸ್ವಾಮೀಜಿ ಶೇಷವಸ್ತ್ರವನ್ನು ರಾಯರಿಗೆ ಅರ್ಪಿಸಿದ್ದು, ಶ್ರೀರಂಗಂ ಅಧಿಕಾರಿಗಳಿಗೆ ಸನ್ಮಾನಿಸಿದರು. ನಂತರ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.</p><p>ಬೆಳಗಿನ ಜಾವ ಪಂಚಾಮೃತ ಅಭಿಷೇಕ, ಉತ್ಸವ ರಾಯರ ಪಾದಪೂಜೆ, ರಜತ ಸಿಂಹವಾಹನೋತ್ಸವ ಇನ್ನಿತರ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ನಡೆದವು. ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇರಿಸಿ ಮಠದ ಪ್ರಾಂಗಣದಲ್ಲಿ ಸಕಲ ಭಕ್ತರೊಂದಿಗೆ ಮೆರವಣಿಗೆ ಮಾಡಲಾಯಿತು.</p><p>ಸುಬುಧೇಂದ್ರ ತೀರ್ಥರು ಇದೇ ಸಂದರ್ಭದಲ್ಲಿ ರಾಯರ ಚಿನ್ನದ ಪಾದುಕೆಗಳಿಗೆ ಪೂಜೆ ಸಲ್ಲಿಸಿದರು.</p><p>ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಮಹಾರಾಷ್ಟ್ರದಿಂದ ಆಗಮಿಸಿರುವ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>