<p><strong>ಮಂತ್ರಾಲಯ (ರಾಯಚೂರು):</strong> ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಆರಂಭವಾಗಿರುವ ಸಪ್ತರಾತ್ರೋತ್ಸವಕ್ಕೆ ಶನಿವಾರ ತಿರುಪತಿ ತಿರುಮಲ ದೇವಸ್ಥಾನದ ಎಇಒ ರಾಮಕೃಷ್ಣ ಅವರು ಟಿಟಿಡಿಯಿಂದ ಮಂತ್ರಾಲಯಕ್ಕೆ ಶ್ರೀವಾರಿ ವಸ್ತ್ರವನ್ನು ತಂದರು. </p><p>ಶ್ರೀ ಮಠದ ಅಧಿಕಾರಿಗಳು ಮತ್ತು ಪಂಡಿತರು ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳ ತಂಡವನ್ನು ಮಹಾದ್ವಾರದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು ಮತ್ತು ಅವರು ಮದ್ವ ಕಾರಿಡಾರ್ ಮೂಲಕ ಶ್ರೀ ಮಠಕ್ಕೆ ಕರೆ ತಂದರು.</p><p>ಮಠದ ಪ್ರವೇಶದಲ್ಲೇ ಇರುವ ಶ್ರೀ ಮಂಚಲಮ್ಮನಿಗೆ ಸೀರೆ ಅರ್ಪಿಸಿದ ನಂತರ, ಶ್ರೀ ರಾಮಕೃಷ್ಣರು ಗೌರವಯುತವಾಗಿ ಶ್ರೀವಾರಿ ವಸ್ತ್ರವನ್ನು ಶ್ರೀ ಸುಬುಧೇಂದ್ರ ತೀರ್ಥರಿಗೆ ಹಸ್ತಾಂತರಿಸಿದರು. ನಂತರ ಶ್ರೀ ಸ್ವಾಮೀಜಿಯವರು ಭಕ್ತಿಯಿಂದ ಶ್ರೀ ರಾಯರ ಮೂಲ ಬೃಂದಾವನಕ್ಕೆ ವಸ್ತ್ರವನ್ನು ಅರ್ಪಿಸಿ ಆರತಿ ಬೆಳಗಿದರು.</p><p>ನಂತರ, ಟಿಟಿಡಿ ಅಧಿಕಾರಿಗಳು ಶ್ರೀವಾರಿ ಶೇಷವಸ್ತ್ರ ಮತ್ತು ಪ್ರಸಾದವನ್ನು ಪರಮಪೂಜ್ಯ ಶ್ರೀ ಸ್ವಾಮೀಜಿಯವರಿಗೆ ಅರ್ಪಿಸಿದರು. ಪ್ರತಿಯಾಗಿ, ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ರಾಮಕೃಷ್ಣ ಮತ್ತು ಅವರ ಕುಟುಂಬದವರಿಗೆ ಶೇಷವಸ್ತ್ರ, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆಯೊಂದಿಗೆ ಆಶೀರ್ವದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂತ್ರಾಲಯ (ರಾಯಚೂರು):</strong> ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಆರಂಭವಾಗಿರುವ ಸಪ್ತರಾತ್ರೋತ್ಸವಕ್ಕೆ ಶನಿವಾರ ತಿರುಪತಿ ತಿರುಮಲ ದೇವಸ್ಥಾನದ ಎಇಒ ರಾಮಕೃಷ್ಣ ಅವರು ಟಿಟಿಡಿಯಿಂದ ಮಂತ್ರಾಲಯಕ್ಕೆ ಶ್ರೀವಾರಿ ವಸ್ತ್ರವನ್ನು ತಂದರು. </p><p>ಶ್ರೀ ಮಠದ ಅಧಿಕಾರಿಗಳು ಮತ್ತು ಪಂಡಿತರು ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳ ತಂಡವನ್ನು ಮಹಾದ್ವಾರದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು ಮತ್ತು ಅವರು ಮದ್ವ ಕಾರಿಡಾರ್ ಮೂಲಕ ಶ್ರೀ ಮಠಕ್ಕೆ ಕರೆ ತಂದರು.</p><p>ಮಠದ ಪ್ರವೇಶದಲ್ಲೇ ಇರುವ ಶ್ರೀ ಮಂಚಲಮ್ಮನಿಗೆ ಸೀರೆ ಅರ್ಪಿಸಿದ ನಂತರ, ಶ್ರೀ ರಾಮಕೃಷ್ಣರು ಗೌರವಯುತವಾಗಿ ಶ್ರೀವಾರಿ ವಸ್ತ್ರವನ್ನು ಶ್ರೀ ಸುಬುಧೇಂದ್ರ ತೀರ್ಥರಿಗೆ ಹಸ್ತಾಂತರಿಸಿದರು. ನಂತರ ಶ್ರೀ ಸ್ವಾಮೀಜಿಯವರು ಭಕ್ತಿಯಿಂದ ಶ್ರೀ ರಾಯರ ಮೂಲ ಬೃಂದಾವನಕ್ಕೆ ವಸ್ತ್ರವನ್ನು ಅರ್ಪಿಸಿ ಆರತಿ ಬೆಳಗಿದರು.</p><p>ನಂತರ, ಟಿಟಿಡಿ ಅಧಿಕಾರಿಗಳು ಶ್ರೀವಾರಿ ಶೇಷವಸ್ತ್ರ ಮತ್ತು ಪ್ರಸಾದವನ್ನು ಪರಮಪೂಜ್ಯ ಶ್ರೀ ಸ್ವಾಮೀಜಿಯವರಿಗೆ ಅರ್ಪಿಸಿದರು. ಪ್ರತಿಯಾಗಿ, ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ರಾಮಕೃಷ್ಣ ಮತ್ತು ಅವರ ಕುಟುಂಬದವರಿಗೆ ಶೇಷವಸ್ತ್ರ, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆಯೊಂದಿಗೆ ಆಶೀರ್ವದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>