<p><strong>ರಾಯಚೂರು:</strong> ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಂತ್ರಾಲಯದಲ್ಲಿ ಗುರುವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗಳಿಗೆ ಪಟ್ಟಾಭಿಷೇಕ ಮಾಡಲಾಯಿತು.</p><p>ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರ ಪಾದುಕೆಗಳಿಗೆ ಪುಷ್ಪಾಭಿಷೇಕ, ಕನಕಾಭಿಷೇಕ ಮತ್ತು ರತ್ನಾಭಿಷೇಕ ಮಾಡಿದರು.</p><p>ಚಿನ್ನದ ರಥ ಹಾಗೂ ಚಿನ್ನದ ಪಲ್ಲಕ್ಕಿಯಲ್ಲಿ ಪರಿಮಳ ಗ್ರಂಥಗಳನ್ನು ಇಟ್ಟು ಚಂಡಿ ವಾದ್ಯ ಭಜನ ಮಂಡಳಿಗಳ ಸದಸ್ಯರ ಜಯಘೋಷ ಮೊಳಗಿಸಲಾಯಿತು. ನಂತರ, ಶ್ರೀ ಮಠದ ಆವರಣದಲ್ಲಿ ಶ್ರೀ ರಾಯರ ರಥೋತ್ಸವ ನಡೆಯಿತು. </p>. <p>ಶ್ರೀ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿದರು. ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.</p><p>ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಮಂತ್ರಾಲಯದಲ್ಲಿ ಆಯೋಜಿಸಿದ್ದ ಹಿಂದೂ ಉತ್ಸವದ ಮೆರವಣಿಗೆಗೆ ಸ್ವಾಮೀಜಿ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಂತ್ರಾಲಯದಲ್ಲಿ ಗುರುವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗಳಿಗೆ ಪಟ್ಟಾಭಿಷೇಕ ಮಾಡಲಾಯಿತು.</p><p>ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರ ಪಾದುಕೆಗಳಿಗೆ ಪುಷ್ಪಾಭಿಷೇಕ, ಕನಕಾಭಿಷೇಕ ಮತ್ತು ರತ್ನಾಭಿಷೇಕ ಮಾಡಿದರು.</p><p>ಚಿನ್ನದ ರಥ ಹಾಗೂ ಚಿನ್ನದ ಪಲ್ಲಕ್ಕಿಯಲ್ಲಿ ಪರಿಮಳ ಗ್ರಂಥಗಳನ್ನು ಇಟ್ಟು ಚಂಡಿ ವಾದ್ಯ ಭಜನ ಮಂಡಳಿಗಳ ಸದಸ್ಯರ ಜಯಘೋಷ ಮೊಳಗಿಸಲಾಯಿತು. ನಂತರ, ಶ್ರೀ ಮಠದ ಆವರಣದಲ್ಲಿ ಶ್ರೀ ರಾಯರ ರಥೋತ್ಸವ ನಡೆಯಿತು. </p>. <p>ಶ್ರೀ ಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿದರು. ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.</p><p>ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಮಂತ್ರಾಲಯದಲ್ಲಿ ಆಯೋಜಿಸಿದ್ದ ಹಿಂದೂ ಉತ್ಸವದ ಮೆರವಣಿಗೆಗೆ ಸ್ವಾಮೀಜಿ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>