<p><strong>ರಾಯಚೂರು:</strong> ‘ಕಾಂಗ್ರೆಸ್ ನಾಯಕ ರಾಹುಲ್ಗಾಂಧಿಗೆ ಬುದ್ಧಿಭ್ರಮಣೆಯಾಗಿದೆ. ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿಲ್ಲ. ರೇಪ್ ಇನ್ ಇಂಡಿಯಾ ಎಂದು ಹೇಳಿಕೆ ನೀಡಿರುವುದು ಅವರ ಮನಸ್ಥಿತಿ ಬಯಲು ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದ ರಾಯರ ಮಠದಲ್ಲಿ ಶನಿವಾರ ಆರಂಭವಾದ ಸುಧಾ ಮಂಗಳಮಹೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮಾತನಾಡುತ್ತಿರುವ ರಾಹುಲ್ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಇದ್ದಂತೆ. ಅವರ ಬಗ್ಗೆ ಕನಿಕರ ಮೂಡುತ್ತಿದೆ’ ಎಂದರು.</p>.<p>‘2014 ರವರೆಗೂ ವಲಸೆ ಬಂದವರನ್ನು ದೇಶದ ನಾಗರಿಕರು ಎಂದು ಪರಿಗಣಿಸುವುದು ಪೌರತ್ವ ಮಸೂದೆ ಜಾರಿಯ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್ ಅನಗತ್ಯವಾಗಿ ಗೊಂದಲ ಮೂಡಿಸುತ್ತಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪೌರತ್ವ ಮಸೂದೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p>‘ಮಳೆ ಹಾಗೂ ಪ್ರವಾಹ ಕಾರಣದಿಂದ ಈ ವರ್ಷ ಕಲ್ಲಿದ್ದಲು ಉತ್ಪಾದನೆ ಶೇ 5 ರಷ್ಟು ಕಡಿಮೆಯಾಗಿದೆ. ಬೇಸಿಗೆಯಲ್ಲಿ ಬೇಕಾಗುವ ಕಲ್ಲಿದ್ದಲ್ಲನ್ನು ರಾಜ್ಯಗಳು ಈಗಲೇ ದಾಸ್ತಾನು ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕಾಂಗ್ರೆಸ್ ನಾಯಕ ರಾಹುಲ್ಗಾಂಧಿಗೆ ಬುದ್ಧಿಭ್ರಮಣೆಯಾಗಿದೆ. ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿಲ್ಲ. ರೇಪ್ ಇನ್ ಇಂಡಿಯಾ ಎಂದು ಹೇಳಿಕೆ ನೀಡಿರುವುದು ಅವರ ಮನಸ್ಥಿತಿ ಬಯಲು ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದ ರಾಯರ ಮಠದಲ್ಲಿ ಶನಿವಾರ ಆರಂಭವಾದ ಸುಧಾ ಮಂಗಳಮಹೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮಾತನಾಡುತ್ತಿರುವ ರಾಹುಲ್ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಇದ್ದಂತೆ. ಅವರ ಬಗ್ಗೆ ಕನಿಕರ ಮೂಡುತ್ತಿದೆ’ ಎಂದರು.</p>.<p>‘2014 ರವರೆಗೂ ವಲಸೆ ಬಂದವರನ್ನು ದೇಶದ ನಾಗರಿಕರು ಎಂದು ಪರಿಗಣಿಸುವುದು ಪೌರತ್ವ ಮಸೂದೆ ಜಾರಿಯ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್ ಅನಗತ್ಯವಾಗಿ ಗೊಂದಲ ಮೂಡಿಸುತ್ತಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪೌರತ್ವ ಮಸೂದೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p>‘ಮಳೆ ಹಾಗೂ ಪ್ರವಾಹ ಕಾರಣದಿಂದ ಈ ವರ್ಷ ಕಲ್ಲಿದ್ದಲು ಉತ್ಪಾದನೆ ಶೇ 5 ರಷ್ಟು ಕಡಿಮೆಯಾಗಿದೆ. ಬೇಸಿಗೆಯಲ್ಲಿ ಬೇಕಾಗುವ ಕಲ್ಲಿದ್ದಲ್ಲನ್ನು ರಾಜ್ಯಗಳು ಈಗಲೇ ದಾಸ್ತಾನು ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>